Headlines

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ | Kagodu thimmappa

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು – ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ , ಮಾಜಿ ಸಚಿವ ಹರತಾಳು ಹಾಲಪ್ಪ ಅನಾರೋಗ್ಯದ ಕಾರಣ ವಿಧಾನಸಭಾ ಮಾಜಿ ಅಧ್ಯಕ್ಷ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿದ ಸಚಿವ ಮಧು ಬಂಗಾರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ ಬಗರ್ ಹುಕುಂ ರೈತರ ರೈತರ…

Read More

BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??

ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ | Viral video

ವೈನ್ ಶಾಪ್ ನಲ್ಲಿ ಎಣ್ಣೆ ಸಾಲ ಕೊಡಲಿಲ್ಲವೆಂದು ರಸ್ತೆ ತಡೆ ನಡೆಸಿದ ಯುವಕ – ಹೀಗೊಂದು ಕುಡುಕನ ಕಿರಿಕ್ , ವೀಡಿಯೋ ವೈರಲ್ |  ವೈನ್ ಶಾಪ್ ನಲ್ಲಿ ಎಣ್ಣೇ ಸಾಲ ಕೊಟ್ಟಿಲ್ಲ ಎಂದು ಯುವಕನೊಬ್ಬ ನಡುರೋಡ್‌ನಲ್ಲಿ ಛತ್ರಿ ಹಿಡಿದು ರಸ್ತೆತಡೆಯನ್ನೆ ನಡೆಸಿರುವ ವಿಚಿತ್ರ ಘಟನೆಯೊಂದು ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗದ ಹೊಸ ತೀರ್ಥಹಳ್ಳಿ(NT) ರೋಡ್‌ನಲ್ಲಿರುವ ಮದ್ಯದಂಗಡಿಗೆ ತೆರಳಿದ ಯುವಕನೊಬ್ಬ ಎಣ್ಣೆ ಕೊಡಿ ಆದರೆ ದುಡ್ಡು ಇಲ್ಲ ಅಂದಿದ್ದಾನೆ. ಹಣ ಕೊಡದೇ ಹೇಗಪ್ಪ ಎಣ್ಣೆ…

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ

Ripponpete | ಕಾಲಭೈರೇಶ್ವರ ಮಹಿಳಾ ಸಂಘದಿಂದ ಶರ್ಮಣ್ಯಾವತಿ ಹೊಳೆಗೆ ಬಾಗಿನ ಅರ್ಪಣೆ ರಿಪ್ಪನ್ ಪೇಟೆ :ಮಲೆನಾಡಿನಲ್ಲಿ ಈ ಬಾರಿ ಸಮೃದ್ಧವಾಗಿ ಮಳೆಯಾಗಿರುವ  ಹಿನ್ನೆಲೆಯಲ್ಲಿ ಹಳ್ಳಕೊಳ್ಳಗಳು ಸೇರಿದಂತೆ ನದಿಗಳು ತುಂಬಿ ಹರಿಯುತ್ತಿವ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಒಕ್ಕಲಿಗ ಮಹಿಳಾ ಸಂಘದ ಸದಸ್ಯರು (ಶರ್ಮಣ್ಯಾವತಿ) ಗವಟೂರು ಹೊಳೆಗೆ ಇಂದು ಬಾಗಿನ ಅರ್ಪಿಸಿದರು. ನಂತರ ಸಂಘದ ಅಧ್ಯಕ್ಷೆ ಸುಮಂಗಲ ಹರೀಶ್ ಮಾತನಾಡಿ  ಕಳೆದು ಎರಡು ವರ್ಷದಿಂದ ಮಲೆನಾಡಿನಲ್ಲಿ  ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ  ಬರಗಾಲದ ಛಾಯೆಯಿಂದ ಮಲೆನಾಡಿನ ಜನತೆ ಹಾಗೂ ಜನ…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ

Ripponpete | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಬಿ ಬಳೆಗಾರ್ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2024 ರ 57ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 57 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ರಾಮಚಂದ್ರ ಬಿ ಬಳೆಗಾರ್ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಬಳ್ಳಾರಿ ರವರು ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ್ ಪವಾರ್ ಅಧ್ಯಕ್ಷತೆಯಲ್ಲಿ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More