Headlines

RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ

ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30ಕ್ಕೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಗಣಪತಿಯ ರಾಜಬೀದಿ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ  ಗಣಪತಿಯ ರಾಜಬೀದಿ ಉತ್ಸವಕ್ಕೆ ಚಾಲನೆ ದೊರೆತಿದೆ.  80 ನೇ ವರ್ಷದ ಹಿಂದೂ ಮಹಾಸಭಾ ಗಣಪತಿಗೆ ಅರ್ಚಕ ನಾಗಭೂಷಣ, ರಾಮಚರಣ ತಂಡದಿಂದ ಪೂಜೆ ನಡೆದಿದೆ. ಶಾಸಕ ಚೆನ್ನಬಸಪ್ಪ, ತಹಶೀಲ್ದಾರ್ ಗಿರೀಶ್ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು‌.  ಡೊಳ್ಳು, ಹುಲಿ ಕುಣಿತ, ವಿವಿಧ ನಾದಗಳಿಂದ ಗಣಪತಿಯು 11-11…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More