ಜಿಲ್ಲಾ ಸುದ್ದಿ:
RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ
RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…
ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |
ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ. ಜೋಗ ಕಾರ್ಗಲ್ ನಲ್ಲಿ ಈ…
THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!
THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…
ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ
ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…
ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ
ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…
ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…
ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ
“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…