ಜಿಲ್ಲಾ ಸುದ್ದಿ:
ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು
ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ. ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…
ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ
ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…
ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ
ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್ಎಲ್ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…
Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ
Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…
ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ
ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…
ಭಾರಿ ಮಳೆಗೆ ಕುಸಿದು ಬಿದ್ದ ಮನೆ
ಭಾರಿ ಮಳೆಗೆ ಕುಸಿದು ಬಿದ್ದ ಮನೆ ರಿಪ್ಪನ್ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.
ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು
ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…
Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ
Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…