ಜಿಲ್ಲಾ ಸುದ್ದಿ:
ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete
ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…
ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE
ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…
ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application
ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…
SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ
SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…
Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ
Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…
ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video
ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024)
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024) Arecanut Rate today |Shimoga | Sagara | Arecanut/ Betelnut/ Supari | Date may 14, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ ಕನಿಷ್ಠ ಗರಿಷ್ಠ ಸರಕು …
ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ
ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…
ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election
ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಅವರೇ ಗೆಲ್ಲುವುದು…