ಜಿಲ್ಲಾ ಸುದ್ದಿ:
Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ
ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…
Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ
Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ ಹೊಸನಗರ : ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಹೊಸನಗರ ತಾಲೂಕಿನ ನಾಗೋಡಿ ಚೆಕ್ ಪೋಸ್ಟ್ ಗಳಲ್ಲಿ ಖಾಸಗಿ ಬಸ್ ದುರ್ಗಶಕ್ತಿ ಕುಂದಾಪುರ ದಿಂದ ಬೆಂಗಳುರಿಗೆ ತೆರಳುವ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 384000 ಮೌಲ್ಯದ ತಂಬಾಕಿನ ಚೀಲದ ಬ್ಯಾಗ್ ಗಳು ಸೇರಿದಂತೆ 8,010 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್…
ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ
ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ, ದೂರದಿಂದಲೇ ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….
Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್
ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ರಿಪ್ಪನ್ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…
Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್
ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….
ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (26-03-2024)
ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 46500 54400 ಸರಕು ಶಿವಮೊಗ್ಗ 77700 82610 ಗೊರಬಲು ಶಿವಮೊಗ್ಗ 26099 31859 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಶಿವಮೊಗ್ಗ 29099 47709
Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!
ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…
ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | Congress
ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವದಂತೆ ಭಾಸವಾಗುತ್ತಿದೆ. ಪ್ರಧಾನಮಂತ್ರಿ ಮಾಧ್ಯಮಗಳ ಎದುರು ಬರುತ್ತಿಲ್ಲ. ವಿರೋಧ ಪಕ್ಷಗಳನ್ನು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಮಟ್ಟ ಹಾಕಲು ಹೊರಟಿದ್ದಾರೆ. ಅವರ ಕಾರ್ಯವೈಖರಿಯನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎಂಬ ಧೋರಣೆ ಎಷ್ಟರ ಮಟ್ಟಿಗೆ ಸರಿ. ದೇಶದ ಜನರು ಈ…
Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ
ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…
SSLC ಪರೀಕ್ಷೆ ಬರೆಯಲು ಪಿಕ್ಆಪ್ ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
SSLC ಪರೀಕ್ಷೆ ಬರೆಯಲು ಪಿಕ್ಆಫ್ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ರಿಪ್ಪನ್ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್ಆಪ್ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು…