ಜಿಲ್ಲಾ ಸುದ್ದಿ:
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ
Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್ಡಿಎಂಸಿ ಅಧ್ಯಕ್ಷರು ಎಸ್ಡಿಎಂಸಿ ಸದಸ್ಯ ನೇರಲೆ ರಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…
ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga
ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga ಕಾಂಗ್ರೆಸ್ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….
Ripponpete | ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ
ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ ರಿಪ್ಪನ್ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು,ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ ಧರ್ಮಗುರು ರೋಮನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ…
Ripponpete | ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ
ಫಲವತ್ತಾದ ಮಣ್ಣು ರೈತರ ನಿಜವಾದ ಅಸ್ತಿ – ಡಾ.ಗಣಪತಿ ಫಲವತ್ತಾದ ಮಣ್ಣಿನಿಂದ ಉತ್ತಮ ಮತ್ತು ಆರೋಗ್ಯಕರ ಬೆಳೆ ಬೆಳೆಯಲು ಸಾಧ್ಯ , ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರು ಡಾ. ಗಣಪತಿ ಹೇಳಿದರು. ರಿಪ್ಪನ್ ಪೇಟೆ ಸಮೀಪದ ಗವಟೂರಿನ ರಾಮಚಂದ್ರರವರ ತೋಟದಲ್ಲಿ ರೋಟರಿ ಕ್ಲಬ್ ರಿಪನ್ ಪೇಟೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ…
Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ
Ripponpete | 40 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ಯೋಧನಿಗೆ ಅದ್ದೂರಿ ಸ್ವಾಗತ ರಿಪ್ಪನ್ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು. ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ…
ರಿಪ್ಪನ್ಪೇಟೆಯ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್ಐ ಯಾರು ಗೊತ್ತಾ..??ಈ ಸುದ್ದಿ ನೋಡಿ |PSI
ರಿಪ್ಪನ್ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಯವರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಬಂಕಾಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಂಗಪ್ಪ ಕರಕಣ್ಣನವರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು ಚುನಾವಣೆ ನಂತರ ಮರು ವರ್ಗಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆ-2024 ಕ್ಕೆ ಸಂಬಂದಿಸಿದಂತೆ ಉಲ್ಲೇಖ [1] ರ ಮಾನ್ಯ…
Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ
Thirthahalli | ಯುವಪತ್ರಕರ್ತ ಅರುಣ್ ಮಂಜುನಾಥ್ ಗೆ ಒಲಿದ ಕಾಯಕಯೋಗಿ ರಾಜ್ಯ ಪ್ರಶಸ್ತಿ – ಹಾವೇರಿಯಲ್ಲಿ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಸಮ್ಮೇಳನದಲ್ಲಿ ತೀರ್ಥಹಳ್ಳಿಯ ಯುವ ಪತ್ರಕರ್ತ ಅರುಣ್ ಮಂಜುನಾಥ್ ರವರಿಗೆ ಕಾಯಕ ಯೋಗಿ ರಾಜ್ಯ ಪ್ರಶಸ್ತಿ ವಿತರಿಸಿ ಗೌರವಿಸಲಾಗಿದೆ. ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು…
Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ರಿಪ್ಪನ್ಪೇಟೆ : ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…
Ripponpete | ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ
ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ, ಇಂದು ಗವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕೃಷಿ ಅರಣ್ಯ ಎಂಬ ವಿಷಯದ ಮೇಲೆ ಗುಂಪು ಚರ್ಚೆಯನ್ನು ನಡೆಸಿದರು. ಈ ಗುಂಪು ಚರ್ಚೆಯಲ್ಲಿ ‘ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ಧತಿಯಾಗಿದೆ, ಕೃಷಿ…
ರಿಪ್ಪನ್ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB
ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ;-ರಿಪ್ಪನ್ಪೇಟೆ –ಆನಂದಪುರ ಪೊಲೀಸ್ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…