Headlines

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ  : ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…

Read More

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿವಿಲ್ ಇಂಜಿನಿಯರ್ ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ನೇರಲಮನೆ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ,  ಸುಣ್ಣ ಬಣ್ಣದ ಅಭಿಯಾನ  ಕಾರ್ಯಕ್ರಮಕ್ಕೆ ಗೋಡೆಗೆ ಬಣ್ಣ ಹೊಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇಂದಿನ…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

Ripponpete | ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಬುಧವಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ….

Read More

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read More

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read More