Headlines

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶಿವಮೊಗ್ಗದ ಪ್ರೇಮಾ ಆಯ್ಕೆ

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ  ಅಧ್ಯಕ್ಷರಾಗಿ ಪ್ರೇಮಾ ಆಯ್ಕೆ ಶಿವಮೊಗ್ಗ – ಬೆಂಗಳೂರಿನ ಭಾರತೀಯ ಸ್ಕೌಟ್ ಭವನದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದ ಪದಾಧಿಕಾರಿಗಳ ಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಸಭೆಯ ತೀರ್ಮಾನದಂತೆ ರಾಜ್ಯ ಅಧ್ಯಕ್ಷರಾಗಿ  ಬಿ ಪ್ರೇಮಾ  ಶಿವಮೊಗ್ಗ , ಉಪಾಧ್ಯಕ್ಷರಾಗಿ ನಿರ್ಮಲಾ   ಹರಿಹರ , ಪ್ರಧಾನ ಕಾರ್ಯದರ್ಶಿಯಾಗಿ ಉಮಾಮಣಿ ಬೆಂಗಳೂರು,ಖಜಾಂಚಿಯಾಗಿ  ವಿಶಾಲಾಕ್ಷಿ ಮಂಗಳೂರು , ಸಹ ಕಾರ್ಯದರ್ಶಿಯಾಗಿ ಪ್ರೇಮಾ ಚನ್ನಪಟ್ಟಣ  ಆಯ್ಕೆಯಾದರು. ಉಳಿದ…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು. ಭಾರತ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More