Headlines

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು : ಹರತಾಳು ಹಾಲಪ್ಪ|ammanaghatta

ಅಮ್ಮನಘಟ್ಟವನ್ನು ಪ್ರೇಕ್ಷಣಿಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು :  ಹರತಾಳು ಹಾಲಪ್ಪ   ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಕ್ಷೇತ್ರವನ್ನಾಗಿಸುವ ಮಹಾದಾಸೆ ಹೊಂದಿದ್ದೆ ಈ ಹಿಂದಿನ ಅವಧಿಯಲ್ಲಿ ಈ ದೇವಸ್ಥಾನವನ್ನು ಶಿಲಾಮಯ ದೇವಸ್ಥಾನವನ್ನಾಗಿಸಲು ಸರ್ಕಾರದಿಂದ ೧.೫೦ ಕೋಟಿ ಆನುದಾನವನ್ನು ಬಿಡುಗಡೆ ಮಾಡಲಾಗಿದ್ದು ನನ್ನ ಅವಧಿಯಲ್ಲಿಯೇ ಪೂರ್ಣವಾಗಬೇಕಾಗಿತ್ತು ಆದರೆ ರಾಜಕೀಯ ವ್ಯತ್ಯಾಸದಿಂದಾಗಿ ಪೂರ್ಣವಾಗಿಲ್ಲ  ಎಂದು ಮಾಜಿ ಮಂತ್ರಿ  ಹರತಾಳು ಹಾಲಪ್ಪ ಹೇಳಿದರು. ಕೋಡೂರು ಗ್ರಾಮ…

Read More

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ|eid milad

ಕೆಂಚನಾಲದಲ್ಲಿ ಈದ್ ಮಿಲಾದ್ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ, ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು.ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ. ರಕ್ತದಾನ ಮಾಡುವುದರಿಂದ ಮೂವರಿಗೆ ಜೀವದಾನ ಮಾಡಿದಂತಾಗುತ್ತದೆ. ಇದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ…

Read More

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ ಗಜಾನನ ವಾಮನ ಸುತಾರ

ಮಾನವೀಯತೆ ಸಮಾಜ ಸೇವೆಗೆ ಪ್ರೇರಣೆ : ಡಿವೈಎಸ್ಪಿ  ಗಜಾನನ ವಾಮನ ಸುತಾರ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನಕ್ಕೆ ಚಾಲನೆ ನೀಡಿದ ಕೆಚ್ಚೆದೆಯ ಕನ್ನಡತಿ ಅಕ್ಕ ಅನು” ರಿಪ್ಪನ್ ಪೇಟೆ : ಸಮಾಜ ಸೇವೆಯಲ್ಲಿ ಮಾನವೀಯತೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡವರಿಗೆ ಮಾನವೀಯ ಪ್ರೇರಣೆ ಯಾಗಿರುತ್ತದೆ. ಎಂದು ಡಿ ವೈ ಎಸ್ ಪಿ ಗಜಾನನ ವಾಮನಸುತಾರ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(11-10-2023) ಸೌಹಾರ್ದ ಸಮಾವೇಶ

ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಮೈದಿನ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1498 ನೇ ಜನ್ಮ ದಿನದ ಪ್ರಯುಕ್ತ ಹುಬ್ಬುನ್ನಬಿ ಮಿಲಾದ್ ಕಾನ್ಪರೆನ್ಸ್ ಅಂಗವಾಗಿ ಸೌಹಾರ್ಧ…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ|hosanagara

ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಆಯ್ಕೆ ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ. ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೊಸನಗರ…

Read More

ಶಾಸಕ ಬೇಳೂರು ಬಹಿರಂಗ ಕ್ಷಮೆಯಾಚನೆಗೆ ತಾಲೂಕ್ ವೀರಶೈವ ಲಿಂಗಾಯಿತ ಮಹಾಸಭಾ ಆಗ್ರಹ|rpet

ರಿಪ್ಪನ್‌ಪೇಟೆ : ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ನಮ್ಮ ಸಮಾಜದ ಹಿರಿಯರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮತ್ತು ಅಖಿಲ ಭಾರತ ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ರವರ ಬಗ್ಗೆ ಹಗುರವಾಗಿ ಮಾತಾನಾಡಿರುವುದನ್ನ ಹೊಸನಗರ ತಾಲ್ಲೂಕು ಅಖಿಲಭಾರತ ವೀರಶೈವ ಮಹಾಸಭಾ ಘಟಕ ಖಂಡಿಸುತ್ತದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.  ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹೇಳಿಕೆಯಲ್ಲಿ ತಿಳಿಸಿದ ಬಿ.ಎಸ್.ಯಡಿಯೂರಪ್ಪನವರು ನಾಲ್ಕು ಬಾರಿ ಈ ರಾಜ್ಯದ…

Read More

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್|rpet

ಉದ್ಯಮಶೀಲತೆಯಿಂದ ಮಹಿಳೆಯರು ಸಾವಲಂಬನೆಯ ಬದುಕನ್ನು ಕಂಡುಕೊಳ್ಳಬಹುದು :ಸಿ.ಎಲ್.ರಮೇಶ್ ರಿಪ್ಪನ್ ಪೇಟೆ : ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಉದ್ಯಮಶೀಲತೆ ಅವಶ್ಯಕ, ಉದ್ಯಮ ಶೀಲತೆಯಿಂದ ಮಹಿಳೆಯರು ಸಾವಲಂಬನೆಯ  ಬದುಕನ್ನು ಕಂಡುಕೊಳ್ಳಬಹುದು.ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ಅರಿವನ್ನು ಹೊಂದಿರಬೇಕು ಎಂದು ಸಂಪನ್ಮೂಲ ವ್ಯಕ್ತಿ ರಮೇಶ್ ಸಿ.ಎಲ್. ಹೇಳಿದರು.  ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಗೂ ಮಲೆನಾಡು ಗ್ರಾಮೀಣ  ಅಭಿವೃದ್ಧಿ ಪ್ರತಿಷ್ಠಾನ ಬೆಳಂದೂರು ಇವರ ಸಂಯುಕ್ತ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More