ಜಿಲ್ಲಾ ಸುದ್ದಿ:
ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest
ಹೊಸನಗರ : ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…
ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest
ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…
“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ
“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…
ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty
ಅಪ್ರಾಪ್ತನಿಂದ ಬೈಕ್ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ. 17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್ಐ ತಿರುಮಲೇಶ್ ವಾಹನಗಳ ತಪಾಸಣೆ…
ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news
ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…
ರಿಪ್ಪನ್ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ|rpet
ರಿಪ್ಪನ್ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ರಿಪ್ಪನ್ಪೇಟೆ : ಸಮೀಪದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ತಾಜುನ್ ಬಿ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಮೂಲತಃ ಗ್ರಾಮದ ನಿವಾಸಿ ತಾಜುನ್ ಬಿ ರಹಮತ್ ಉಲ್ಲಾ ರವರು ಕಳೆದ 13 ವರ್ಷಗಳಿಂದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ತಾಜುನ್ ಬಿ ರಹಮತ್ ಉಲ್ಲಾ ರವರು ನಿರೂಪಣೆ ಹಾಗೂ ಕವನ…
ರಿಪ್ಪನ್ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest
ರಿಪ್ಪನ್ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ ರಿಪ್ಪನ್ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…
ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds
ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್ ಕೂಡ , ಜೆಡಿಎಸ್ನ್ನ ತೊರೆದು ಕಾಂಗ್ರೆಸ್ ತೊರೆದಿದ್ದರು. ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್ ಮುಖಂಡ ಕಾಂಗ್ರೆಸ್ ಸೇರಲಿದ್ದಾರೆ. ಸದ್ಯ ಜೆಡಿಎಸ್ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್ ಸೇರಲಿದ್ದಾರೆ ಎಂಬುವುದಾಗಿ…
ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day
ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…
ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news
ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…