ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…
ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು: ಶಾಸಕ ಗೋಪಾಲಕೃಷ್ಣ ಬೇಳೂರು|gkb
ಹೊಸನಗರ : ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಶಿಕ್ಷಕರು ಉತ್ತಮ ಸಮಾಜ ನಿರ್ಮಾಣದ ಆಧಾರ ಸ್ತಂಭಗಳು ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಆರ್ಯ ಈಡಿಗರ ಸಭಾ ಭವನದಲ್ಲಿ ಆಯೋಜಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ, ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಹೊಸನಗರ ತಾಲೂಕಿನಲ್ಲಿ 41 ಪ್ರೌಢಶಾಲೆಗಳಲ್ಲಿ 17 ಶಾಲೆ 100% ಫಲಿತಾಂಶ ಜತೆ…
ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ|moolegadde
`ವರುಣನ ಕೃಫೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ’’ ರಿಪ್ಪನ್ಪೇಟೆ;-ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಅಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು. ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.
ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ; ಸಂಚಾರಕ್ಕೆ ಅನುವು|agumbe
ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಎಲ್ಲಾ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…
ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news
ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…
ರಿಪ್ಪನ್ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ |Rpet news
ರಿಪ್ಪನ್ಪೇಟೆಯ ಶಿಕ್ಷಕ ತಿಮ್ಮಪ್ಪರವರಿಗೆ ಒಲಿದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ | ರಿಪ್ಪನ್ಪೇಟೆ : ಪಟ್ಟಣದ ವಿನಾಯಕನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ತಿಮ್ಮಪ್ಪ ಸಿ ರವರು ಸೇರಿದಂತೆ ಹೊಸನಗರ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದೆ. ಮೂಲತಃ ಆಯನೂರು ಸಮೀಪದ ಕುಂಸಿ ಗ್ರಾಮದ ನಿವಾಸಿ ತಿಮ್ಮಪ್ಪ ಸಿ ರವರು ಕಳೆದ 14 ವರ್ಷಗಳಿಂದ ಪಟ್ಟಣದ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ತಿಮ್ಮಪ್ಪ ಸಿ ರವರಿಗೆ…
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ|Prathibha karanji
ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಪ್ರತಿಭೆ ಅರಳಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್ ಆರ್ ಕೃಷ್ಣಮೂರ್ತಿ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂಗುಡ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ ಪ್ರತಿಭಾ ಕಾರಂಜಿ…
ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|district news
ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್| ರಿಪ್ಪನ್ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ…
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…
ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ|dog attack
ಆರು ವರ್ಷದ ಮಗು ಸೇರಿ ಐವರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಗ್ರಾಪಂ ವ್ಯಾಪ್ತಿಯ ಹೊಳೆಬೆಳಗಲು ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲಾ ವಾಹನ ಇಳಿದು ಮನೆಗೆ ಹೋಗುವಾಗ ಆರು ವರ್ಷದ ಬಾಲಕಿ ದಾಳಿ ನಡೆಸಿದ್ದು ಮುಖದ ಮೇಲೆ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಮಗುವಿನ ಮೇಲೆ ದಾಳಿಗೆ ಮುಂದಾದಾಗ ಪೋಷಕರು ರಕ್ಷಿಸಿದ್ದಾರೆ. ವಯಸ್ಕರು ಹಾಗೂ ಹಸುವಿನ ಮೇಲೆಯೂ ದಾಳಿ ನಡೆಸಿದೆ. ನಾಯಿಗೆ…