ಜಿಲ್ಲಾ ಸುದ್ದಿ:
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಶಿಬಿರ ಸಹಕಾರಿ|NSS
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್ಎಸ್ಎಸ್ ಸಹಕಾರಿ ರಿಪ್ಪನ್ಪೇಟೆ;-ವಿದ್ಯಾರ್ಥಿ ಜೀವನ ಅತ್ಯುತ್ತಮವಾಗಿದ್ದು ತಮ್ಮ ವ್ಯಾಸಂಗದ ಜೊತೆ ಗ್ರಾಮದಲ್ಲಿನ ಸ್ವಚ್ಚತೆ ಹಾಗೂ ಪರಿಸರ ರಕ್ಷಣೆಯೊಂದಿಗೆ ಗ್ರಾಮೀಣ ಭಾಗದ ಮೂಲಭುತ ಸೌಲಭ್ಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ಸೇವಾ ಶಿಬಿರಗಳು ಪೂರಕವಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಸಮೀಪದ ಕಲ್ಲುಹಳ್ಳ ಮಲೆನಾಡು ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಅವರಣದಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ವತಿಯಿಂದ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷೀಕ…
ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ
ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…
ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….
ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault
ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…
ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು|ವರನ ಕುಟುಂಬದ ನಡೆಗೆ ಶ್ಲಾಘನೆ|ANP
ತಂದೆಯ ಸಾವಿನ ನೋವಲ್ಲೂ ಹಸೆಮಣೆ ಏರಿದ ಪುತ್ರಿಯರು ತಂದೆಯನ್ನು ಕಳೆದುಕೊಂಡ ನೋವಿನ ಮಧ್ಯೆ ಸಹೋದರಿಯರು ಹಸೆಮಣಿ ಏರಿದರು.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೆಂಜಿಗಾಪುರ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಬುಧವಾರ ತಬ್ಬಲಿಗಳಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನೆರವೇರಿಸಿ ಸಂಬಂಧಿಗಳು ಮಾದರಿಯಾದರು. ಬನವಾಸಿಯ ಮಂಜುನಾಥ್ ರವರ ಪುತ್ರಿಯರಾದ ಪಲ್ಲವಿ ಮತ್ತು ಪೂಜಾ ಅವರ ವಿವಾಹ ನಿಶ್ಚಯವಾಗಿ ಸಕಲ ಸಿದ್ಧತೆ ಮುಗಿದಿತ್ತು. ಇದಕ್ಕಾಗಿ ಇಬ್ಬರು ಹೆಣ್ಣು ಮಕ್ಕಳು ತಂದೆಯೊಂದಿಗೆ ತಮ್ಮ ತಾಯಿಯ ತವರು ಮನೆಯಾದ ಚೆನ್ನಕೊಪ್ಪದ…
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ
ರಿಪ್ಪನ್ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…
ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ|Bakrid
ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು…
ಶಿಕ್ಷಣ ಸಚಿವ ಮಧುಬಂಗಾರಪ್ಪನವರಿಗೆ ರಿಪ್ಪನ್ಪೇಟೆಯಲ್ಲಿ ಅದ್ದೂರಿ ಸ್ವಾಗತ|education minister
“ಶಿಕ್ಷಣ ಸಚಿವ ಮಧುಬಂಗಾರಪ್ಪನರಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ’’ ರಿಪ್ಪನ್ಪೇಟೆ;-ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ತೀರ್ಥಹಳ್ಳಿಗೆ ರಿಪ್ಪನ್ಪೇಟೆ ಮಾರ್ಗವಾಗಿ ತೆರಳುತ್ತಿದ್ದಾಗ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರಿಂದ ಸಾರ್ವಜನಿಕರಿಂದ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಬರಮಾಡಿಕೊಂಡರು. ಕಾರ್ಯಕರ್ತರ ಮತ್ತು ಸಾರ್ವಜನಿಕರ ಸ್ವಾಗತ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪನವರು ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಶಕ್ತಿ ಗ್ಯಾರಂಟಿ ಯೋಜನೆಯಡಿ ಬಸ್ ಬಿಡುವಂತೆ ಸಚಿವರಿಗೆ ಮನವಿ ಮಾಡಿಕೊಂಡ ಮೇರಗೆ ಸಚಿವರು ಸ್ಪಂದಿಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣ ಬಸ್…
ಬಾರದ ಮಳೆ : ಹಣ್ಣು-ತರಕಾರಿ ದರಗಳಲ್ಲಿ ಭಾರಿ ಏರಿಕೆ|price hike
ಮಳೆಯ ವಿಳಂಬದ ನಡುವೆ ಮಲೆನಾಡಿನಲ್ಲಿ ದಿನೇ ದಿನೇ ತರಕಾರಿ ಬೆಲೆ ಏರಿಕೆಯಾಗುತ್ತಿದೆ. ಶಿವಮೊಗದಲ್ಲಿ ಎರಡು ದಿನಗಳ ಹಿಂದಷ್ಟೇ ಟೊಮೆಟೊ ಕೆ.ಜಿಗೆ ₹40ಕ್ಕೆ ಸಿಗುತ್ತಿತ್ತು. ಆದರೆ ಈಗ ಅದು ₹80ಕ್ಕೆ ಹೆಚ್ಚಳಗೊಂಡಿದೆ. ಅದರ ಬೆನ್ನಲ್ಲೇ ಬೀನ್ಸ್ ಕೆ.ಜಿಗೆ ₹100, ಕ್ಯಾರೆಟ್ ₹80, ಬದನೆ ₹60, ಮೂಲಂಗಿ ₹40, ಹೂಕೋಸು ₹40, ಆಲೂಗಡ್ಡೆ ₹25, ಬಟಾಣಿಯ ಬೆಲೆಯೂ (₹80) ಒಂದೂವರೆ ಪಟ್ಟು ಹೆಚ್ಚಾಗಿದೆ. ಸೊಪ್ಪಿನ ಬೆಲೆಯೂ ಗಗನಕ್ಕೇರಿದೆ. ಕೊತ್ತಂಬರಿ ಕಟ್ಟಿಗೆ ₹ 10, ಸಬ್ಬಸಿಗೆ, ಎಳೆಹರಿವೆ, ದಂಟಿನ ಸೊಪ್ಪು, ಮೆಂತೆ…
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet
ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್ಐ ಪ್ರವೀಣ್ ರಿಪ್ಪನ್ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…