Headlines

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!

ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್‌ಗೆ ಕಾಡಾನೆ ದಿಢೀ‌ರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್‌ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…

Read More

ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು

ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ (COTPA) ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ದಾಳಿ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ₹5000 ದಂಡವನ್ನು ಸಂಗ್ರಹಿಸಲಾಯಿತು. ಈ ದಾಳಿ ಕಾರ್ಯಾಚರಣೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ನೇತೃತ್ವ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್…

Read More

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ

ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…

Read More

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…

Read More