Headlines

ಮೇ.31ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ….

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…

Read More

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು.  ತೀರ್ಥಹಳ್ಳಿ ತಾಲ್ಲೂಕು  ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…

Read More

ಪ್ರಯಾಣಿಕರಿದ್ದ ಬೋಗಿಗಳನ್ನು ಬಿಟ್ಟು ಮುಂದಕ್ಕೆ ಚಲಿಸಿದ ತಾಳಗುಪ್ಪ-ಬೆಂಗಳೂರು ರೈಲು|Train

ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್​ ಇವತ್ತು ಭದ್ರಾವತಿ ಸಮೀಪ  ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.  ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ.  ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ಜ್ಯೋತಿ ಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದ್ದುಗೊಳಿಸಿದ ಜಿಲ್ಲಾಧಿಕಾರಿ|Jyothi mangalya

ರಿಪ್ಪನ್‌ಪೇಟೆ : ಜ್ಯೋತಿಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದುಗೊಳಿಸಿದ್ದ ಜಿಲ್ಲಾಧಿಕಾರಿ ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಕಲ್ಯಾಣ ಮಂದಿರಗಳಲ್ಲಿ‌ ಒಂದಾದ ಜ್ಯೋತಿ ಮಾಂಗಲ್ಯ ಮಂದಿರದ ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲ್ಲಿನ ಬರುವೆ ಗ್ರಾಮದ ಸರ್ವೆ ನಂಬರ್ 63/1ಬಿ ರಲ್ಲಿ 0-38 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಭೂಪರಿವರ್ತನೆಯ ಷರತ್ತು ಉಲ್ಲಂಘನೆ ಮಾಡಿಕೊಳ್ಳುವುದರೊಂದಿಗೆ ಆ ಜಾಗದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಜಾಗದಲ್ಲಿ ಕಲ್ಯಾಣ ಮಂದಿರವನ್ನು ನಿರ್ಮಿಸಿರುವುದನ್ನು…

Read More

ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ|Congress

ಕಿಮ್ಮನೆ ರತ್ನಾಕರ್ ಗೆ ಪತ್ರ ಬರೆದ ಉಪ ಮುಖ್ಯಮಂತ್ರಿ ಡಿಕೆಶಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತಗೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬತೆದಿದ್ದಾರೆ. ಡಿಕೆಶಿ ವಕುಮಾರ್ ರಿಂದ ಕಿಮ್ಮನೆ ರತ್ನಾಕರ್ ಗೆ ಪತ್ರದ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ ಡಿಕೆಶಿ ಪರಾಜಿತರಾದರು ಪಕ್ಷಕ್ಕಾಗಿ ಉತ್ತಮ ಕೆಲಸ ನಿರ್ವಹಿಸಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.   ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭಾ…

Read More

ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು – ಸ್ಥಳೀಯರಿಂದ ರಕ್ಷಣೆ|Rpet

ರಿಪ್ಪನ್‌ಪೇಟೆ : ಗ್ರಾಪಂ ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ತೆರೆದ ಬಾವಿಗೆ ಬಿದ್ದ ಹಸು ರಿಪ್ಪನ್‌ಪೇಟೆ : ಗ್ರಾಪಂ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಹಸುವೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಚೌಡೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ಗ್ರಾಪಂ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೆರೆದ ಬಾವಿ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಚೌಡೇಶ್ವರಿ ಬೀದಿಯ ಅಂಬೇಡ್ಕರ್ ಸಭಾ ಭವನದ ಮುಂಭಾಗದಲ್ಲಿ ತೆರೆದ ಪ್ರದೇಶದಲ್ಲಿ ಬಾವಿ ನಿರ್ಮಿಸುವಾಗ…

Read More

ಹೊಸನಗರ ಮತ್ತು ಸಾಗರದಲ್ಲಿ ಕೃಷಿಕರ ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್” ಸಂಸ್ಥೆಯ ನೂತನ ಶಾಖೆ ಪ್ರಾರಂಭ|easy life

ಮಲೆನಾಡಿನ ಕೃಷಿಕರ ಮೊಗದಲ್ಲಿ ಮಂದಹಾಸ ಬೀರುವಂತಹ ಸೇವೆ ನೀಡಿಕೊಂಡು ಕೃಷಿಕ ಮಿತ್ರರ ನಂಬಿಕೆ, ಪ್ರೀತಿ, ವಿಶ್ವಾಸರ್ಹ ಸೇವೆಗೆ ಹೆಸರಾದ “ಈಸೀ ಲೈಫ್ “ ಸಂಸ್ಥೆಯ ನೂತನ ಶಾಖೆಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಪ್ರಾರಂಭಿಸಲಾಗಿದೆ. ಹೊಸನಗರ ಪಟ್ಟಣದ ಕೊಡಚಾದ್ರಿ ಕಾಲೇಜು ಎದುರು ನೂತನ ಶಾಖೆ ದಿನಾಂಕ 22-05-23 ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಹೊಸನಗರ ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಕರಿ ಬಸವಯ್ಯ ಉಪಸ್ಥಿತರಿದ್ದರು.  ಅದೇ ದಿನ ಸಂಜೆ 4 ಗಂಟೆಗೆ ಸಾಗರದಲ್ಲಿ ಮತ್ತ್ತೊಂದು ನೂತನ ಶಾಖೆ ಶುಭಾರಂಭ ಗೊಂಡಿದ್ದು,…

Read More

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…

Read More