ಜಿಲ್ಲಾ ಸುದ್ದಿ:
ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru
ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ. ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ. 2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…
ರಿಪ್ಪನ್ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP
ರಿಪ್ಪನ್ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…
ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL
ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…
ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara
ಹೊಸನಗರ : ಕ್ಷೇತ್ರ ಪುನರ್ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….
ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara
ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್ ಅನ್ವರ್ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…
ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress
ರಿಪ್ಪನ್ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…
ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…
KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ
ತಾಂತ್ರಿಕ ದೋಷದಿಂದ ಕೆಎಸ್ಆರ್ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್ಅರ್ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…
ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress
ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…