ಜಿಲ್ಲಾ ಸುದ್ದಿ:
ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR
ರಿಪ್ಪನ್ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…
ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp
ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…
ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally
ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…
ಮೊಟ್ಟೆ ತಿನ್ನಲು ಹೋಗಿ ಕೋಳಿ ಗೂಡಿನಲ್ಲಿಯೇ ಬಂಧಿಯಾದ ನಾಗರಹಾವು|Cobra
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಕೋಳಿ ಮೊಟ್ಟೆಯನ್ನು ತಿನ್ನಲು ಹೋದ ನಾಗರಹಾವು ಕೋಳಿ ಗೂಡಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ವಡಾಹೊಸಳ್ಳಿ ಅಂಗನವಾಡಿ ಕಾರ್ಯಕರ್ತೆ ಸುಶೀಲ ಎಂಬುವವರ ಮನೆಯ ಕೋಳಿಗೂಡಿನಲ್ಲಿ ಮೊಟ್ಟೆ ತಿನ್ನಲು ಹೋಗಿ ನಾಗರಹಾವೊಂದು ಗೂಡಿನಲ್ಲಿ ಬಂಧಿಯಾಗಿತ್ತು, ಕೋಳಿಗೂಡಿನಲ್ಲಿ ಮೊಟ್ಟೆ ತಿಂದು ಗೂಡಿನಲ್ಲಿ ಹೆಡೆ ಬಿಚ್ಚಿ ಆಟವಾಡುತ್ತಿರುವ ನಾಗರಹಾವನ್ನು ಕಂಡ ಮನೆಯವರು ತಕ್ಷಣ ರಿಪ್ಪನ್ಪೇಟೆಯ ಉರಗ ತಜ್ಞ ಗಂಗಾಧರ(ಗಂಗಣ್ಣ) ರವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಉರಗತಜ್ಞ ಗಂಗಾಧರ್ ಸ್ಥಳಕ್ಕೆ ತೆರಳಿ ಕೋಳಿ ಗೂಡಿನಲ್ಲಿ…
AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ
ರಿಪ್ಪನ್ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು. ರಿಪ್ಪನ್ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ…
ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್ ಗಾಂಧಿ|thirthahalli
ತೀರ್ಥಹಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….
ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ
ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…
ಬೇಳೂರು ಪರ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಭರ್ಜರಿ ರೋಡ್ ಶೋ|election
ರಿಪ್ಪನ್ಪೇಟೆ : ರಾಜ್ಯ ಕಂಡ ಧೀಮಂತ ನಾಯಕ ದಿ.ಎಸ್ ಬಂಗಾರಪ್ಪಜಿಯವರ ಅಭಿಮಾನಿಗಳಿರುವ ಈ ಕ್ಷೇತ್ರದಲ್ಲಿ ಅವರೇ ಬೆಳೆಸಿದ ಗೋಪಾಲಕೃಷ್ಣ ಬೇಳೂರು ಇವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ನಟ ಡಾ.ಶಿವರಾಜ್ ಕುಮಾರ್ ರವರು ಮನವಿ ಮಾಡಿದರು. ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಪರ ಭರ್ಜರಿ ರೋಡ್ ಶೋ ನಡೆಸಿ ನಂತರ ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಸಜ್ಜನ ವ್ಯಕ್ತಿತ್ವದ ಬೇಳೂರು ಗೋಪಾಲಕೃಷ್ಣ ರವರನ್ನು ಬೆಂಬಲಿಸಿ ವಿಧಾನಸೌದಕ್ಕೆ ಕಳಿಸಿಕೊಡಿ…
130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ್ಯಕರ್ತರ ಮೇಲೆ…
ಈ ಬಾರಿಯ ಚುನಾವಣೆಯಲ್ಲಿ ಗೆಲುವು ನನ್ನದೇ : ಗೋಪಾಲಕೃಷ್ಣ ಬೇಳೂರು|beluru
ರಿಪ್ಪನ್ಪೇಟೆ : ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನ ಹಾಗೂ ರಿಪ್ಪನ್ಪೇಟೆಯ ಗುಡ್ಶಫರ್ಡ್ ಚರ್ಚ್ ಗೆ ಇಂದು ಬೆಳಗ್ಗೆ ಭೇಟಿ ನೀಡಿ ಧರ್ಮ ಗುರುಗಳ ದರ್ಶನಾಶೀರ್ವಾದ ಪಡೆದರು. ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ರೇಣುಕಾನಂದ ಸ್ವಾಮೀಜಿ ಅಭ್ಯರ್ಥಿ ಗೋಪಾಲಕೃಷ್ಣರವರಿಗೆ ಶುಭಹಾರೈಸಿ ತಾವು ಜನರ ಸಂಕಷ್ಟವನ್ನು ಪರಿಹರಿಸುವ ಮೂಲಕ ಮತದಾರರಲ್ಲಿ ಪ್ರೀತಿ ವಿಶ್ವಾಸಗಳಿಸಿ ನಿಮಗೆ ಮುಂದೆ ಒಳ್ಳಯ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು….