ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ
ರಿಪ್ಪನ್ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…
ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ
ರಿಪ್ಪನ್ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…
ಮನೆಯ ಕೊಟ್ಟಿಗೆಯಲ್ಲಿ ಅಡಗಿ ಕುಳಿತಿದ್ದ ಚಿರತೆ – ಅರಣ್ಯಾಧಿಕಾರಿಗಳಿಂದ ಯಶಸ್ವಿ ರಕ್ಷಣಾ ಕಾರ್ಯಾಚರಣೆ|leopard
ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ. ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಕಾರ್ಯಾಚರಣೆಯಲ್ಲಿ…
ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|
ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…
ರಿಪ್ಪನ್ಪೇಟೆ : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಭಾರಿ ನಷ್ಟ|fire
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ. ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ…
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ|voting awareness
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಸಮಾನ ಮತದಾನ ಹಕ್ಕು ನೀಡಿದ ದೇಶ ಭಾರತ – ವೀರನಗೌಡ ಹುಡೇದ ರಿಪ್ಪನ್ ಪೇಟೆ : ವಿಶ್ವದ ಕೆಲವು ದೇಶಗಳು ನೂರಾರು ವರ್ಷಗಳ ಹಿಂದೆಯೇ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಸಹ ಮಹಿಳೆಯರಿಗೆ ಮತದಾನದ ಹಕ್ಕು ನೀಡಿರಲಿಲ್ಲ. ಆ ರಾಷ್ಟ್ರಗಳು ಅನೇಕ ವರ್ಷಗಳ ನಂತರ ಸಮಾನ ಮತದಾನ ಹಕ್ಕು ಪಡೆಯುವಂತಾಯಿತು. ಆದರೆ ಭಾರತ ಮಾತ್ರ ಸ್ವಾತಂತ್ರ ಬಂದ ಪ್ರಥಮದಲ್ಲಿ ಸ್ತ್ರೀ-ಪುರುಷ ಎಂದು ಭೇದ ಭಾವ ಮಾಡದೆ ಸಮಾನ ಮತದಾನದ ಹಕ್ಕನ್ನು ಸಂವಿಧಾನದಲ್ಲಿ ನೀಡಲಾಯಿತು. ಈ ಕಾರ್ಯದಲ್ಲಿ ಡಾ. ಬಾಬಾ…
ರಿಪ್ಪನ್ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election
ರಿಪ್ಪನ್ಪೇಟೆ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್ಪ್ರೆಸ್ ಒಳಗೆ ಮಾದರಿ ಮತದಾನ…
ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP
ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…
ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election
ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…
ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli
“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ’’ ರಿಪ್ಪನ್ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…