Headlines

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಹಲವು ವರ್ಷಗಳ ಹಿಂದೆ ಮಳೆಗಾಗಿ ಪ್ರಾರ್ಥಿಸಿ ಡ್ಯಾಮ್ ಗೆ ಬಿಟ್ಟಿದ್ದ ದೇವರ ಮೂರ್ತಿ ದಿಡೀರ್ ಪ್ರತ್ಯಕ್ಷ|linganamakki

ಶಿಕಾರಿಪುರ : ಮಲೆನಾಡಿನಲ್ಲಿ ಮಳೆಯ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಒಡಲು ಬರಿದಾಗಿದ್ದು ಮಾಲಿಕಾಂಬ ದೇವರ ಮೂರ್ತಿ ಲಿಂಗನಮಕ್ಕಿ ಹಿನ್ನೀರಿನಲ್ಲಿ ಕಾಣಿಸಿಕೊಂಡಿದೆ.  ಮಾಲಿಕಾಂಬ ದೇವರ ಮೂರ್ತಿ ಶಿಕಾರಿಪುರದ ಚಿಕ್ಕ ಸಾಲೂರು ಗ್ರಾಮದ ಗ್ರಾಮ ದೇವತೆಯಾಗಿದೆ. ಕಳೆದ 12 ವರ್ಷಗಳ ಹಿಂದೆ ಮಾಲೀಕಾಂಬ ದೇವತೆಯ ಮೂರ್ತಿಯನ್ನ ಹಿನ್ನಿರಿನಲ್ಲಿ ಬಿಡಲಾಗಿತ್ತು. ಹಿನ್ನಿರಿನಲ್ಲಿ ನೀರು ಬರಿದಾದ ಹಿನ್ನೆಲೆ ದೇವರ ಮೂರ್ತಿ ಗೋಚರಗೊಂಡಿದೆ.  12 ವರ್ಷ ಕಳೆದರೂ ಸಹ ಯಾವುದೇ ಹಾನಿಯಾಗದೆ ಮಾಲಿಕಾಂಬ ದೇವರ ಮೂರ್ತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಸ್ಥರು…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಭರ್ತಿಯಾದ ಗಾಜನೂರಿನ ತುಂಗಾ ಡ್ಯಾಂ – ಸಂಜೆಯೊಳಗೆ ಗೇಟ್ ಓಪನ್ : ನದಿಪಾತ್ರದ ಜನರಿಗೆ ಎಚ್ಚರಿಕೆ|tunga

ಶಿವಮೊಗ್ಗ : ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ. ಬುಧವಾರ ಬೆಳಿಗ್ಗೆ 8.30 ರ ಮಾಹಿತಿಯಂತೆ, ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಲು ಇನ್ನೂ ಕೇವಲ 2 ಅಡಿಯಷ್ಟು ನೀರು ಹರಿದು ಬರಬೇಕಾಗಿದೆ. ಪ್ರಸ್ತುತ 4830 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ.  ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಒಳಹರಿವಿನ ಪ್ರಮಾಣದಲ್ಲಿ ನಿರಂತರ ಏರಿಕೆ…

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More