Headlines

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ – ಹಾಲಪ್ಪ ಮತ್ತು ಆರಗ ಜ್ಞಾನೇಂದ್ರರಿಗೆ ಟಿಕೆಟ್ ಘೋಷಣೆ|BJP

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಶಿವಮೊಗ್ಗ ನಗರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್​ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್​​ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ. …

Read More

ಭಾರಿ ಬಹುಮತದಿಂದ ಕಿಮ್ಮನೆ ರತ್ನಾಕರ್ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ|RMM

ಭಾರಿ ಬಹುಮತದಿಂದ ಕಿಮ್ಮನೆ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಹಕಾರಿ ವಿಭಾಗದ ಡಾ.ಆರ್.ಎಂ.ಮಂಜುನಾಥ್ ಗೌಡ ಹೇಳಿದರು.  ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತೀರ್ಥಹಳ್ಳಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಗೊಂದಲ,ಭಿನ್ನಾಭಿಪ್ರಾಯ ಇಲ್ಲ,ಸಣ್ಣ,ಪುಟ್ಟ ಭಿನ್ನಾಭಿಪ್ರಾಯ ಗಳಿರಬಹುದು ಅದನ್ನು ಬಗೆಹರಿಸಿಕೊಂಡು ಪ್ರೀತಿ,ವಿಶ್ವಾಸದೊಂದಿಗೆ ಒಂದಾಗಿ ನಮ್ಮ ಪಕ್ಷವನ್ನು ಗೆಲ್ಲಿಸಲಿದ್ದೇವೆ.ಟಿಕೆಟ್ ಘೋಷಣೆ ಮುನ್ನ ಇದ್ದ ಭಿನ್ನಾಭಿಪ್ರಾಯ ಸಹಜ…

Read More

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ|high- temperature

ಬಿಸಿಲ ಬೇಗೆಗೆ ತತ್ತರಿಸಿದ ಮಲೆನಾಡಿನ ಜನತೆ : ಬತ್ತಿದ ಬಾವಿಗಳು – ಕುಡಿಯುವ ನೀರಿಗೆ ಹಾಹಾಕಾರ ರಿಪ್ಪನ್‌ಪೇಟೆ;-ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ ಕುಮದ್ವತಿ ಶರ್ಮಿನಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-40 ಡಿಗ್ರಿಯಷ್ಟು ಬಿಸಿಲಿನ ಝಳಕ್ಕೆ ರೈತ ನಾಗರೀಕರು ತತ್ತರಿಸಿದ್ದಾರೆ.ಕುಡಿಯಲು…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವ ಚಂದ್ರಶೇಖರ್ ಪೂಜಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!?

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವುದು ಚಂದ್ರಶೇಖರ್ ಪೂಜಾರ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!? ಹರಿಹರ: ಈಗಾಗಲೇ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 13ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಮೇ ಹತ್ತರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ 13 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬಿಳಲಿದೆ. ಪ್ರಮುಖ ಪಕ್ಷಗಳು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಕಿಮ್ಮನೆ ನೇತೃತ್ವದ ಕಾಂಗ್ರೆಸ್ ರಥಕ್ಕೆ ಆರ್ ಎಂ ಮಂಜುನಾಥ್ ಗೌಡ ಸಾರಥಿ.!!- ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಕೂಡಿ ಬಾಳೋಣ ಮಂತ್ರ|kimmane-Rmm

ತೀರ್ಥಹಳ್ಳಿ : ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಈ ಬಾರಿ ಚುನಾವಣೆ ರಂಗೇರಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮದ್ಯೆ ಪೈಪೋಟಿ ಮತ್ತಷ್ಟು ರೋಚಕತೆಯಿಂದ ಇರಬಹುದು ಎಂದು ಅಂದಾಜಿಸಲಾಗುತ್ತಿದೆ. ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಆರ್ ಎಂ ಮಂಜುನಾಥ ಗೌಡರು ವಿವಿಧ ಕಡೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸುತ್ತಿದ್ದ ಕಾರಣ ಬಂಡಾಯ ಏಳಬಹುದು ಎನ್ನಲಾಗುತಿತ್ತು. ಆದರೆ ಜೋಡೆತ್ತುಗಳು ಒಂದಾಗಿ ಚುನಾವಣೆ ಎದುರಿಸಿ ಕಾಂಗ್ರೆಸ್ ಪಕ್ಷವನ್ನು…

Read More

ಕಾಲೇಜಿನ ಗ್ರಂಥಾಲಯದಲ್ಲಿ ಪ್ರತ್ಯಕ್ಷವಾದ ಹಾವು – ಭಯ ಮೂಡಿಸಿದ್ದ ಬರೋಬ್ಬರಿ 8 ಅಡಿ ಉದ್ದದ ಹಾವು

ಶಿವಮೊಗ್ಗ ನಗರದ ಸಹ್ಯಾದ್ರಿ ಸೈನ್ಸ್ ಕಾಲೇಜು ಆವರಣದಲ್ಲಿರುವ ಗ್ರಂಥಾಲಯದಲ್ಲಿಯೇ ಹಾವೊಂದು ಕಾಣಿಸಿಕೊಂಡಿತ್ತು.  ಮೊನ್ನೆ ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು 8 ಅಡಿ ಉದ್ದದ ಹಾವೊಂದು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಪುಸ್ತಕಗಳ ರಾಶಿಯ ಅಡಿಯಲ್ಲಿ ಸೇರಿಕೊಂಡಿದ್ದ ಹಾವು, ಆಗಾಗ ಸದ್ದು ಮಾಡುತ್ತಿತ್ತು. ಮೊದಲೇ ನಿಶ್ಚಬ್ಧವಾಗಿದ್ದ ಲೈಬ್ರರಿಯಲ್ಲಿ ಹಾವಿನ ಸದ್ದು ತುಸು ಜೋರಾಗಿಯೇ ಕೇಳಿಬರುತ್ತಿತ್ತು.  ಇನ್ನೂ ಏನು ಶಬ್ಧವಾಗುತ್ತಿದೆ ಎಂದು ನೋಡಿದ ಸಿಬ್ಬಂದಿ ಹಾವೊಂದು ಗೃಂಥಾಲಯವನ್ನು ಸೇರಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಹಾವನ್ನು ಸುರಕ್ಷಿತವಾಗಿ ಹಿಡಿಯಬಲ್ಲ ಸ್ನೇಕ್​ ಜಯಂತ್ ಬಾಬುರನ್ನ ಸಂಪರ್ಕಿಸಿದ್ದಾರೆ.  ಕರೆ…

Read More