ಜಿಲ್ಲಾ ಸುದ್ದಿ:
ಶಿವಮೊಗ್ಗ – ಹರಕೆರೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಕೋಟ್ಯಾಂತರ ರೂ ವಶ|election
Shivamogga ಮಾ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಹರಕೆರೆ ಚೆಕ್ ಪೋಸ್ಟ್ ನಲ್ಲಿ 1 ಕೋಟಿ 39 ಲಕ್ಷ ರೂ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನಗಳನ್ನು ತಪಾಸಣೆ ನಡೆಸುತ್ತಿರುವ ವೇಳೆ ಯಾವುದೇ ದಾಖಲೆಯಿಲ್ಲದೆ ಹರಕೆರೆ ಚೆಕ್ ಪೋಸ್ಟ್ ನಲ್ಲಿ ಸಾಗಿಸುತ್ತಿದ್ದ ಬೊಲೆರೋ ವಾಹನದಲ್ಲಿ 1 ಕೋಟಿ 39 ಲಕ್ಷ ರೂ. ಹಣ ಪತ್ತೆಯಾಗಿದೆ. ಕಾರು ತಪಾಸಣೆ ನಡೆಸಿದಾಗ 1 ಕೋಟಿ ರೂ. ನಗದು…
ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital
ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…
ರಿಪ್ಪನ್ಪೇಟೆಯ ಗಾನ ಕೋಗಿಲೆ ಕು|| ಪ್ರಣತಿ ಅಣ್ಣಪ್ಪ ರವರಿಗೆ ಶಾಸಕರಿಂದ ಸನ್ಮಾನ|pranathi
ರಿಪ್ಪನ್ಪೇಟೆ : ಪಟ್ಟಣದ ಗಾನ ಕೋಗಿಲೆ ಕುಮಾರಿ ಪ್ರಣತಿ ಅಣ್ಣಪ್ಪ ರವರಿಗೆ ಇತ್ತೀಚೆಗೆ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ ಲೋಕದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡು ನಾಡಿನಾದ್ಯಂತ ಗಾನ ಸುಧೆಯನ್ನು ಹರಿಸಿ ಸಂಗೀತ ಪ್ರಿಯರಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ ಯುವ ಪ್ರತಿಭೆ ರಿಪ್ಪನ್ ಪೇಟೆಯ ಪ್ರಣತಿ…
ತೀರ್ಥಹಳ್ಳಿ : ಹನಿಟ್ರ್ಯಾಪ್ ಮೂಲಕ ಸೆರೆ ಸಿಕ್ಕ ಒಂಟಿ ಸಲಗ – ಬಂಡೀಪುರ ಅಭಯಾರಣ್ಯಕ್ಕೆ ಪುಂಡಾನೆಯ ರವಾನೆ|elephant
ತೀರ್ಥಹಳ್ಳಿ : ಪಟ್ಟಣದೊಳಗೆ ನುಗ್ಗಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ದೇವಂಗಿಯ ಮಳೂರು ಕಾಡಿನಲ್ಲಿ ಆನೆ ಸೆರೆ ಹಿಡಿಯಲಾಯಿತು. ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಸಕ್ರೆಬೈಲು ಬಿಡಾರದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆನೆ ಕಾಣಿಸಿಕೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಆನೆಗೆ ಚುಚ್ಚು ಮದ್ದಿನ ಇಂಜೆಕ್ಷನ್ ಡಾರ್ಟ್ ಮಾಡಿ ಸೆರೆ ಹಿಡಿದಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಕಾಡಾನೆ ತೀರ್ಥಹಳ್ಳಿ ಪಟ್ಟಣದೊಳಗೆ ನುಗ್ಗಿತ್ತು….
ನಾಳೆ(31-03-2023) ರಿಪ್ಪನ್ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್
ರಿಪ್ಪನ್ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…
ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಬೇಳೂರು ಸವಾಲ್|sagara
ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ…
ಗೃಹ ಸಚಿವರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ
ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಮೂಲಸೌಕರ್ಯ ವಂಚಿತ ಮಾದ್ಲುಮನೆ ,ಉಂಬ್ಳೆಬೈಲು ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. 60 ವರ್ಷಗಳಿಂದ ಗ್ರಾಮ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರಿಗೆ ಚುನಾವಣೆಯನ್ನು ಬಹಿಷ್ಕರಿಸಲು…
ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election
ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…
ರಿಪ್ಪನ್ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ
ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್ಪೇಟೆ ಪೊಲೀಸ್…
ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election
ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…