ಜಿಲ್ಲಾ ಸುದ್ದಿ:
ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ|Ripponpet
“ಹಳ್ಳಿ ಮಕ್ಕಳ ರಂಗ ಹಬ್ಬದ ಸಮಾರೋಪ ಹಾಗೂ ಬಸವ ಜಯಂತಿ ಸಂಭ್ರಮೋತ್ಸವ’’ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಅರಿವಿಲ್ಲದಂತಾಗಿದೆ :ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ. ರಿಪ್ಪನ್ಪೇಟೆ;- ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಮಕ್ಕಳಲ್ಲಿ ಸಂಸ್ಕೃತಿ ಹಾಗೂ ಸಂಸ್ಕಾರ ಇಲ್ಲದಂತಾಗಿದೆ.ಇತ್ತೀಚಿನ ದಿನಗಳಲ್ಲಿ ನಾಟಕ ರಂಗಕಲೆ ಜಾನಪದ ತತ್ವ ಪದಗಳಿಂದ ನಮ್ಮ ಕಲೆ ಸಂಸ್ಕೃತಿ ಗಳು ಜೀವಂತವಾಗಿ ಉಳಿದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಕ್ಕಳ ರಂಗ ಹಬ್ಬ ಪ್ರೇರಕವೆಂದು ಮಳಲಿಮಠದ ಡಾ.ಗುರುನಾಗಭೂಷಣ…
ಸಾಗರದ ಪ್ರತಿಷ್ಠಿತ RBD ಗ್ರೂಪ್ಸ್ ನ ಮಹೇಶ್ ಮತ್ತು ಜಲೀಲ್ ನೂರಾರು ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಸೇರ್ಪಡೆ
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ದಿನಕಳೆದಂತೆ ರಂಗೇರುತಿದ್ದು ಅಭಿವೃದ್ದಿಗಿಂತ ಪ್ರೀತಿ ವಿಶ್ವಾಸಕ್ಕೆ ನಮ್ಮ ಸಹಕಾರ ಎಂದು ಕ್ಷೇತ್ರದ ಜನ ತೀರ್ಮಾನ ಮಾಡಿದಂತೆ ಭಾಸವಾಗುತಿದ್ದು ಆ ನಿಟ್ಟಿನಲ್ಲಿ ಯುವಕ ಯುವತಿಯರಿಂದ ಹಿಡಿದ್ದು ವೃದ್ದರವರೆಗೂ ಬೇಳೂರು ಗೋಪಾಲಕೃಷ್ಣ ರವರಿಗೆ ಬೆಂಬಲ ಸೂಚಿಸುತ್ತಿರುವುದು ಎದ್ದು ಕಾಣುತ್ತಿದೆ. ಹೌದು ಸಾಗರದ ಪ್ರಖ್ಯಾತ ಉದ್ಯಮಿಗಳಾದ RBD ಡೆವಲಪರ್ಸ್ ನ ಜಲೀಲ್ ಮತ್ತು ಮಹೇಶ್ ಇವರು ಸಾಗರ ಕ್ಷೇತ್ರದಾದ್ಯಂತ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡು ಕ್ಷೇತ್ರದಾದ್ಯಂತ ಹಲವು ಅಭಿಮಾನಿಗಳನ್ನು ಹೊಂದಿದ್ದಾರೆಯೇ ಹೊರತು ಯಾವುದೇ ಪಕ್ಷಗಳಲ್ಲಿ ಗುರುತಿಸಿಕೊಂಡವರಲ್ಲ…
ರಿಪ್ಪನ್ಪೇಟೆ : ಪದವಿ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…
ರಿಪ್ಪನ್ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ|Ripponpet
ರಿಪ್ಪನ್ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ. ರಿಪ್ಪನ್ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಮೃತರು ಏಳು ಜನ ಪುತ್ರರು ಹಾಗೂ…
23 ಕೋಟಿ ಮೌಲ್ಯದ ಚಿನ್ನ ಸೀಜ್
ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್ ಆದ ಬಂಗಾರದ ತೂಕ 40 ಕೆ.ಜಿ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಕಂಟೇನರ್ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್ಪೋಸ್ಟ್ನಲ್ಲಿ ಕಂಟೇನರ್ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್…
ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ|Ramadan
ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮುಪ್ತಿ ಇಜ್ ಹಾರ್ ಅಹಮದ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಶುಕ್ರವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಇಂದು…
PU RESULT | ಕಲಾ ವಿಭಾಗದಲ್ಲಿ ಶೇ 95% ಅಂಕ ಪಡೆದ ಮಿಸ್ಬಾ – ಆನಂದಪುರ ಪಿಯು ಕಾಲೇಜಿಗೆ ಶೇ 77% ರಷ್ಟು ಫಲಿತಾಂಶ
PUC RESULT | ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 77% ರಷ್ಟು ಫಲಿತಾಂಶ ಆನಂದಪುರ : ಕಳೆದ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜ್ಗೆ ಶೇಕಡಾ 77 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಶೇಕಡಾ 95% ಅಂಕ ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 143 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 110 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ…
ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ
ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…
ರಿಪ್ಪನ್ಪೇಟೆ ಕಾಲೇಜ್ಗೆ ಪಿಯು ಪರೀಕ್ಷೆಯಲ್ಲಿ 81.96% ರಷ್ಟು ಫಲಿತಾಂಶ
ರಿಪ್ಪನ್ಪೇಟೆ ಕಾಲೇಜ್ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ ರಿಪ್ಪನ್ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು. ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ…
ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ್ಯಾಂಕ್ – ಅಮೃತಾ ಕಾಲೇಜಿಗೆ 90.28% ಫಲಿತಾಂಶ
ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…