ಜಿಲ್ಲಾ ಸುದ್ದಿ:
ಶಿವಮೊಗ್ಗದ ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ – ಕುಣಿದು ಕುಪ್ಪಳಿಸಿದ ಯುವಕ ಯುವತಿಯರು | ರಿಪ್ಪನ್ಪೇಟೆ : ಹೋಳಿ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಯುವಕರು|Holi
ಶಿವಮೊಗ್ಗ : ನಿರಂತರ ಹಾಡು, ಹಾಡಿಗೆತಕ್ಕಂತೆ ಸ್ಟೆಪ್ಸು ಹೀಗೆ ಶಿವಮೊಗ್ಗ ಗೋಪಿ ವೃತ್ತದ ಬಳಿ ಹೋಳಿ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ಬಾರಿ ವಿನೂತನವಾಗಿ ಹೋಳಿ ಹಬ್ಬವನ್ನಆಚರಿಸಲಾಗಿದೆ. ಎರಡು ವರ್ಷಗಳಿಂದ ಕೊರೋನ ಹಿನ್ನಲೆಯಲ್ಲಿ ಈ ಹಬ್ಬಗಳು ಕಳೆಗುಂದಿದ್ದವು. ಆದರೆ ಈ ಬಾರಿ ಗೋಪಿ ವೃತ್ತದ ಬಳಿ ಡಿಜೆ ಹಾಡು ಎಂತಹವರನ್ನೂ ಹಬ್ವ ಆಚರಣೆಗೆ ಕೈಬೀಸಿ ಕರೆಯಲಿದೆ. ಗೀತಾಂತಲೀ…., ಕಾಣದಂತೆ ಮಾಯವಾದನು ನಮ್ಮ ಶಿವ…, ನಮ್ಮೂರ ಜಾತ್ರೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ಹೀಗೆ ನಿರಂತರ ಡಿಜೆ ಹಾಡುಗಳಿಗೆ ಯುವಕ ಯುವತಿಯರು…
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise
ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…
ರಿಪ್ಪನ್ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet
ರಿಪ್ಪನ್ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…
ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ
ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…
ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga
ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು. ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…
ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba
ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…
ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ|shivaji jayantji
ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ ರಿಪ್ಪನ್ಪೇಟೆ : ಅಪ್ರತಿಮ ಹೋರಾಟ, ವಿಭಿನ್ನ ಯುದ್ಧಕಲೆ, ಸಂಘಟನಾ ಚತುರತೆ, ಆದರ್ಶ ದೇಶ ಪ್ರೇಮದ ಮೂಲಕ ಇಂದಿಗೂ ನಮ್ಮೆಲ್ಲರಿಗೆ ಆದರ್ಶಪ್ರಾಯ ಆಗಿರುವ ಶಿವಾಜಿ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅರಿಯುವುದು ಅಗತ್ಯ ಎಂದು ಯುವ ಚಿಂತಕ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಪಟ್ಟಣದಲ್ಲಿ ಮರಾಠ ಸಮಾಜ ಭಾನುವಾರ ಆಯೋಜಿಸಿದ್ದ ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಯಿ ಜೀಜಾಬಾಯಿ ಶಿವಾಜಿಗೆ…
ಪತ್ರಕರ್ತರಿಗೆ ಕಿರುಕುಳ – ದಾವಣಗೆರೆ ಎಸ್ ಪಿ ರಿಷ್ಯಂತ್ ಮೇಲೆ ಕ್ರಮ ಕೈಗೊಳ್ಳುವಂತೆ ರಿಪ್ಪನ್ಪೇಟೆ ಪತ್ರಕರ್ತರಿಂದ ಒತ್ತಾಯ|Rpet
ರಿಪ್ಪನ್ಪೇಟೆ : ಫೆಬ್ರವರಿ 27 ರಂದು ಸೋಗಾನೆಯ ನೂತನ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್.ಎಸ್. ಹಾಲಸ್ವಾಮಿ (ಟಿವಿ ಭಾರತ್) ಅವರನ್ನು ಅಕ್ರಮವಾಗಿ ಪೊಲೀಸ್ ವಾಹನದಲ್ಲಿ ಕೂಡಿಟ್ಟು ಉದ್ದಟತನದಿಂದ ವರ್ತಿಸಿದ ದಾವಣೆಗೆರೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ಅಮಾನತ್ತಿನಲ್ಲಿಡುವಂತೆ ಒತ್ತಾಯಿಸಿ ಶನಿವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಗೃಹ ಸಚಿವರಿಗೆ ರಾಜಸ್ವ ನಿರೀಕ್ಷಕರಾದ ಅಫ಼್ರೋಜ್ ರವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ…
ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress
ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…
ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ|Inauguration
ಚುನಾಯಿತ ಪ್ರತಿನಿಧಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು – ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಶಾಸಕರಾದವರಿಗೆ ಗ್ರಾಮೀಣ ಜನರ ಸಮಸ್ಯೆಯ ಅರಿವಿರಬೇಕು ಜೊತೆಯಲ್ಲಿ ಅಭಿವೃದ್ದಿಗಾಗಿ ಸರ್ಕಾರದ ಅನುದಾನವನ್ನು ತರುವ ಎದೆಗಾರಿಕೆ ಇರಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆಯ ವ್ಯಾಪ್ತಿಯಲ್ಲಿ ಬರುವ ಸಾಗರ ತೀರ್ಥಹಳ್ಳಿ ಮಾರ್ಗದ ಅಂದಾಸುರ ಬಳಿಯಲ್ಲಿನ ಶಿಥಿಲಗೊಂಡ ಸಂಪರ್ಕ ಸೇತುವೆಗೆ 2.40 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ…