Headlines

ಕಾಂಗ್ರೆಸ್ ಮೂರನೇ ಪಟ್ಟಿ ಪ್ರಕಟ – ಶಿವಮೊಗ್ಗ ನಗರ,ಗ್ರಾಮಾಂತರದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ|Congress

ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. ಮೂರನೇ ಪಟ್ಟಿಯಲ್ಲಿ ಈ ಕುತೂಹಲಗಳಿಗೆ ತೆರೆ ಬಿದ್ದಿದೆ. ಶಿವಮೊಗ್ಗದಿಂದ ಮಾಜಿ ಶಾಸಕ ಹೆಚ್‌.ಎಂ.ಚಂದ್ರಶೇಖರಪ್ಪ ಪುತ್ರ ಹೆಚ್‌.ಸಿ.ಯೋಗೇಶ್‌ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ….

Read More

ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಜನಸಾಗರ|nomination

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹರತಾಳು ಹಾಲಪ್ಪನವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಹೊಳೆಕೊಪ್ಪದ ಧನಾಂಜನೇಯಸ್ವಾಮಿ ದೇವಸ್ತಾನದಲ್ಲಿ ಪತ್ನಿ ಸಮೇತರಾಗಿ ಪೂಜೆ ಸಲ್ಲಿಸಿದ ಹಾಲಪ್ಪನವರು ನಂತರ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮರೆವಣಿಗೆ ಮೂಲಕ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಮಾಜಿ ಶಾಸಕ ಬಿ.ಸ್ವಾಮಿರಾವ್ ಹಾಗೂ ಕಾಗೋಡು ಪುತ್ರಿ ರಾಜನಂದಿನ ಜೊತೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ವೇಳೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸೇರಿಸುವ ಮೂಲಕ ಹಾಲಪ್ಪ ಶಕ್ತಿ ಪ್ರದರ್ಶನ ಮಾಡಿದರು….

Read More

ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಬಿ ಯುವರಾಜ್ ಗೌಡ ಸ್ಪರ್ಧೆ|election

ಸಾಗರ-ಹೊಸನಗರ ಕ್ಷೇತ್ರಕ್ಕೆ ಬಿ.ಯುವರಾಜ್‌ರವರು ಬಿ.ಜೆ.ಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಸಭೆಯ ಚುನಾವಣೆಗೆ ಸ್ಪರ್ದಿಸುವುದಾಗಿ ತಿಳಿಸಿದ್ದಾರೆ. ಅವರು ಹೊಸನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಲಿ ಬಿ.ಜೆ.ಪಿ ಜಿಲ್ಲಾ ಸಮಿತಿ ಸದಸ್ಯರು ಹಾಲಿ ಜಿಲ್ಲಾ ಅಖಿಲ ಭಾರತ ವೀರಶೈವ ಮಾಹಾಸಭಾ ಕಾರ್ಯದರ್ಶಿಗಳು ಆಗಿದ್ದು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ತಾಲೂಕು ಬಿ.ಜೆ.ಪಿ. ಅಧ್ಯಕ್ಷರಾಗಿ, ಜಿಲ್ಲಾ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ತಾಲೂಕ ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ನನಗೆ ಬಿಜೆಪಿ ಪಕ್ಷ ಇಲ್ಲಿಯವರೆಗೆ…

Read More

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event

ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ   ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು.  ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ  ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.  ದೇವಸ್ಥಾನ…

Read More

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ

ರಿಪ್ಪನ್‌ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು  ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…

Read More

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate

“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…

Read More