ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot
ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್ಕಾರ್ಪ್ನ ವ್ಯಾಪಾರ ಸಾಲಗಳೊಂದಿಗೆ…
ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ಆಸ್ಪತ್ರೆಯ ಕಟ್ಟಡ ಏರಿ ಕುಳಿತ ಹೊಸನಗರ ತಾಲೂಕಿನ ನಗರ ಗ್ರಾಪಂ ಅಧ್ಯಕ್ಷ…!!!|nagara
ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ. ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟಡವೇರಿ…
ಹೊಸನಗರ : ಸಂಸಾರದಲ್ಲಿ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath
ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…
ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!
ಶಿವಮೊಗ್ಗದ ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….
ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election
ರಿಪ್ಪನ್ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard
ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…
ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು
ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರ ಕವಿ ಕುವೆಂಪು ಹೆಸರು ಫಿಕ್ಸ್ – ಯಡಿಯೂರಪ್ಪ ಘೋಷಣೆ|airport
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ…
ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ|church
ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು – ಧರ್ಮಗುರು ರೋಷನ್ ಪಿಂಟೋ ರಿಪ್ಪನ್ಪೇಟೆ : ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಶಿವಮೊಗ್ಗ ಮಲ್ಟಿಪಲ್ ಸೋಷಿಯಲ್ ಸರ್ವಿಸ್ ನಿರ್ದೇಶಕರಾದ ಧರ್ಮಗುರು ರೋಷನ್ ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ ಅವರು ಸಮಾಜದಲ್ಲಿನ ಪ್ರತಿಯೊಬ್ಬರು ಪ್ರೀತಿಯನ್ನು…