ಜಿಲ್ಲಾ ಸುದ್ದಿ:
ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ
ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…
ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ
ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಹೊಳೆಬೆನವಳ್ಳಿ ಗ್ರಾಮಸ್ಥರ ಪ್ರತಿಭಟನೆ ಶಿವಮೊಗ್ಗ : ಹೊಳೆಬೆನವಳ್ಳಿ ಗ್ರಾಮ ಠಾಣಾ ಜಾಗದಲ್ಲಿ ಸ್ವಚ್ಛ ಸಂಕೀರ್ಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯ ವಿರೋಧಿಸಿ ಇಂದು ಹೊಳೆಬೆನವಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೊಳೆಬೆನವಳ್ಳಿ ಗ್ರಾಮದಲ್ಲಿ ಗ್ರಾಮ ಠಾಣಾ ಜಾಗವಿದ್ದು, ಈ ಜಾಗದ ಸುತ್ತಮುತ್ತ ಉಡಸಲಮ್ಮ, ಮಾತಂಗೆಮ್ಮ, ನಂದಿಬಸವೇಶ್ವರ ದೇವಸ್ಥಾನಗಳಿವೆ. ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಊರಿನ ನಾಗರೀಕರಿಗೆ ಸಾಂಕ್ರಾಮಿಕ ರೋಗ ಹರಡುವ ಸಂಭವವಿದೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಾಗರೀಕರ ವಿರೋಧವಿದ್ದರೂ…
ರೌಡಿಸಂ ಚಟುವಟಿಕೆ ನಿಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ಸೂಚನೆ
ರೌಡಿಸಂ ಚಟುವಟಿಕೆ ನಿಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ಸೂಚನೆ ಶಿವಮೊಗ್ಗ : , ಅಕ್ಟೋಬರ್ 10: ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದ ಡಿಎಆರ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿ, ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳೊಂದಿಗೆ ನಡೆಸಿದ ಅಪರಾಧ ವಿಮರ್ಶನಾ ಸಭೆಯ ಅಧ್ಯಕ್ಷತೆವಹಿಸಿ…
ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024 ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಚಾಮರಾಜನಗರದ ಡಾ.ಎಂ.ಬಸವಣ್ಣ, ಬೆಂಗಳೂರಿನ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಕಲಬುರಗಿಯ ಡಾ.ಡಿ.ಬಿ.ನಾಯಕ್, ಮುಂಬೈಯ ಡಾ.ವಿಶ್ವನಾಥ ಕಾರ್ನಾಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದರು. ಸಾಹಿತ್ಯಶ್ರೀ ಪ್ರಶಸ್ತಿಗೆ ಚಿಕ್ಕಮಗಳೂರಿನ ಡಾ.ಬಿ.ಎಂಪುಟ್ಟಯ್ಯ, ಬೆಂಗಳೂರು ಡಾ.ಕೆ.ವೈ. ನಾರಾಯಣಸ್ವಾಮಿ, ಕೋಲಾರದ ಪದ್ಮಾಲಯ ನಾಗರಾಜ್, ತುಮಕೂರಿನ ಬಿ.ಯು.ಸುಮಾ,…
ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ
ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್ 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…
ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಮುರುಳಿಧರ್ ಕೆರೆಹಳ್ಳಿ ಆಯ್ಕೆ
ರಿಪ್ಪನ್ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಬಳೆಗಾರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಲಾ ಕೌಸ್ತುಭ ಕನ್ನಡ ಸಂಘ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್…
ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ
ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಅಜ್ಗರ್ ಖಾನ್ (21) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಅಪರಾಧಿಗೆ ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ. ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು 8-10-2025 ರಂದು ಈ…
ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ
ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…
ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ
ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…
ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ
ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್ 22 ರಿಂದ ಸಾಮಾಜಿಕ…