ಜಿಲ್ಲಾ ಸುದ್ದಿ:
ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award
ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ. ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ ಭಾನುವಾರ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ ಮೈಸೂರಿನ ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…
ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds
ಹೊಸನಗರ : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು. ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್ ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್…
ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet
ರಿಪ್ಪನ್ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…
ರಿಪ್ಪನ್ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard
ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ. ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ : ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…
ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack
ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…
ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…
ರಿಪ್ಪನ್ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi
ರಿಪ್ಪನ್ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…
ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball
ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡದಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…
IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!
ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…
ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC
ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…