Headlines

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ಮುಖ್ಯ ಶಿಕ್ಷಕಿಯ ವರ್ಗಾವಣೆ – ಶಾಲೆಗೆ ಬೀಗ ಹಾಕಿ ಮಕ್ಕಳ ಪ್ರತಿಭಟನೆ ! school

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ. ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ. ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್  ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಬಿದನೂರಿನಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ – ಪೂರ್ವಭಾವಿ ಸಭೆ|nagara

ಶಾಂತವೇರಿ ಗೋಪಾಲಗೌಡರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರದಿಂದ ಮಾರ್ಚ್ ತಿಂಗಳಲ್ಲಿ ನಡೆಸಲಿದ್ದು ಆ ಹಿನ್ನಲೆಯಲ್ಲಿ ಗೋಪಾಲಗೌಡ ಅಧ್ಯಯನ ವೇದಿಕೆ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಪ್ರಪ್ರಥಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ದಲ್ಲಿ ದಿವಂಗತ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ನಗರ ಭಾಗದ ಎಲ್ಲಾ ಪಕ್ಷದ ಸಮಾನ ಮನಸ್ಕ ಮುಖಂಡರ ಜೊತೆ ಚರ್ಚಿಸಲಾಯಿತು. ಜನವರಿ 30 ರಂದು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು  ಗೋಪಾಲಗೌಡ ಅಭಿಮಾನಿಗಳು ಹಾಗೂ ಸಮಾನ ಮನಸ್ಕರ ಸಭೆ ಕರೆಯಲು…

Read More