ಜಿಲ್ಲಾ ಸುದ್ದಿ:
ನಾಳೆ(21-12-2022) ರಿಪ್ಪನ್ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi
ರಿಪ್ಪನ್ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….
ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ – ಆರ್ ಎಂ ಮಂಜುನಾಥ್ ಗೌಡ|DKS
ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ ಯಾಗಿದ್ದು,ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ಚಟುವಟಿಕೆಗಳ ಜೊತೆಗೆ ತನ್ನ ತಪ್ಪುಗಳನ್ನು ಮತ್ತು ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೆಪಿಸಿಸಿ ನಾಯಕರಾದ ಡಿ ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ ಎಂದು ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಕರ್ನಾಟಕ ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರ ಶಿಕ್ಷಣ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ…
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ
ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…
ರಿಪ್ಪನ್ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet
ರಿಪ್ಪನ್ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…
ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school
ರಿಪ್ಪನ್ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ ದಾನ ಮಾಡಬೇಕು ರೂಪ ಮತ್ತು ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…
ರಿಪ್ಪನ್ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard
ರಿಪ್ಪನ್ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…
ರಿಪ್ಪನ್ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard
ರಿಪ್ಪನ್ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ ಪಡೆದುಕೊಂಡ ಘಟನೆ ನಡೆದಿದೆ. ರಿಪ್ಪನ್ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…
ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ : ಹರತಾಳು ಹಾಲಪ್ಪ|Ripponpet
ರಿಪ್ಪನ್ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ…
ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet
ರಿಪ್ಪನ್ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್ಪೇಟೆಯ ಜ್ಯೋತಿಮಾಂಗಲ್ಯ…
ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films
ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು. ರಾಮಾ ರಾಮಾ ರೇ…