ಜಿಲ್ಲಾ ಸುದ್ದಿ:
ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds
ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc
ರಿಪ್ಪನ್ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…
H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds
ರಿಪ್ಪನ್ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…
ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball
ರಿಪ್ಪನ್ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…
ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್ ಟ್ರಸ್ಟ್ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…
ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…
ರಾಷ್ಟ್ರ ಮಟ್ಟದಲ್ಲಿ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…
ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner
ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡುಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ. ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…
ಅಕಾಲಿಕ ಮಳೆಯಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು : ಚಂದನ್ ಗೌಡ|jaya Karnataka
ರಿಪ್ಪನ್ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು…
ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…