Headlines

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More