Headlines

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಾದ ಆಯುಷ್ ಮತ್ತು ಅನೀಶ್ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ರಾಮಕೃಷ್ಣ ವಿದ್ಯಾಲಯದ 10 ನೇ ತರಗತಿ ವಿದ್ಯಾರ್ಥಿ ಆಯುಷ್ 800 ಮೀ ಹಾಗೂ 1500 ಮೀ ಓಟ ಸ್ಪರ್ದೆಯಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 7 ನೇ ತರಗತಿಯ ಅನೀಶ್ 100 ಮೀ ಓಟದಲ್ಲಿ…

Read More

ಆನಂದಪುರ : ಉರುಳಿಗೆ ಸಿಲುಕಿ ಪ್ರಾಣ ಬಿಟ್ಟ ಚಿರತೆ|Leopard

ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು…

Read More

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ಡಾ.ಧನಂಜಯ್ ಸರ್ಜಿ ಹಾಗೂ ಕೆ ಎಸ್ ಪ್ರಶಾಂತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ|BJP

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು. ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತಿಯಲ್ಲಿ ಅವರು ಪಕ್ಷ…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ನಾಯಿಯನ್ನು ಭೇಟೆಯಾಡಲು ಬಂದ ಚಿರತೆ ಬೋನಿಗೆ ಬಿತ್ತು – ಅಂತೂ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನು ಸೆರೆ ಹಿಡಿದ ಅರಣ್ಯ ಇಲಾಖೆ|Leopard

ಹಲವು ದಿನಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ  ಭದ್ರಾವತಿ ತಾಲೂಕು  ಹರಮಘಟ್ಟ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು ಚಿರತೆಯನ್ನ ನೋಡಲು ಜನ ಸಾಗರವೇ ಹರಿದು ಬಂದಿದೆ. ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಚಿರತೆ ಹಾವಳಿ ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಇದರಬೆನ್ನಲ್ಲೇ ಗ್ರಾಮಸ್ಥರು ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಹರಮಘಟ್ಟದ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು….

Read More