ಜಿಲ್ಲಾ ಸುದ್ದಿ:
ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu
ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…
ರಿಪ್ಪನ್ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet
ರಿಪ್ಪನ್ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…
ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli
ರಿಪ್ಪನ್ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…
ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba
ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು. ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…
ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM
ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಕಾಗೋಡು ತಿಮ್ಮಪ್ಪ ಅರ್ಜಿ ಸಲ್ಲಿಕೆ – ಕುತೂಹಲ ಮೂಡಿಸಿದ ಕಾಗೋಡು ನಡೆ!!..???|Kagodu
ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ.ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲೂಕಿನ ತ್ಯಾಗರ್ತಿಯಲ್ಲಿ ಅವರು ಮಾದ್ಯಮದೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವರಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ…
ಯಜಮಾನನ ಜೀವ ಉಳಿಸಿದ ಸಾಕು ನಾಯಿ – ಗ್ರಾಮಸ್ಥರಿಂದ ಶ್ವಾನದ ಮೆರವಣಿಗೆ|Sooduru
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ತಾನೇ ಸಾಕಿದ ನಾಯಿ ಪತ್ತೆ ಹಚ್ಚಿದ ವಿನೂತನ ಘಟನೆ ನಡೆದಿದೆ. ಮಾಲೀಕನನ್ನು ಸಾವಿನ ದವಡೆಯಿಂದ ಪಾರು ಮಾಡಿದ ನಾಯಿಯ ಸ್ವಾಮಿ ನಿಷ್ಠೆಗೆ ಇಡೀ ಸೂಡೂರು ಗ್ರಾಮವೇ ಹರ್ಷ ವ್ಯಕ್ತಪಡಿಸಿ ನಾಯಿಯ ಮೆರವಣಿಗೆ ಮಾಡಿದೆ. ನಿನ್ನೆ(ನ.12) ಬೆಳೆಗ್ಗೆ 6 ಗಂಟೆ ಸುಮಾರಿಗೆ ಮನೆಗೆ ಸೌದೆ ತರಲು ಎಂದು ಸೂಡೂರು ಗ್ರಾಮದ 50 ವರ್ಷ ವಯಸ್ಸಿನ ಶೇಖರಪ್ಪ ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ….
ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket
ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…
ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt
ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…
ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara
ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…