ಜಿಲ್ಲಾ ಸುದ್ದಿ:
ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga
ಶಿವಮೊಗ್ಗ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…
ಅಕ್ಟೋಬರ್ 26 ರಂದು ರಿಪ್ಪನ್ ಪೇಟೆಯಲ್ಲಿ ನವೀಕೃತ ಗುಡ್ಶಫರ್ಡ್ ಚರ್ಚ್ ಲೋಕಾರ್ಪಣೆ’|Ripponpet
ರಿಪ್ಪನ್ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್ ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ…
ರಿಪ್ಪನ್ಪೇಟೆ : ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ|Ripponpet
ರಿಪ್ಪನ್ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ಮೆಕ್ಕಾ ಜುಮ್ಮಾ ಮಸೀದಿ, ತಝೀಝುಲ್ ಇಸ್ಲಾಂ ಮದ್ರಸ.ಮೀಲಾದ್ ಸ್ವಾಗತ ಸಮಿತಿ, ಬದ್ರಿಯಾ ಮದ್ರಸ ಸಮಿತಿ ಎಸ್.ಎಸ್.ಎಫ್,ಮತ್ತು ಎಸ್.ವೈ.ಎಸ್. ಇವರ ಸಹಯೋಗದಲ್ಲಿ ಅಯೋಜಿಸಲಾದ “ಇಲಲ್ ಹಬೀಬ್ ಮೀಲಾದ್’ ಸಮಾರಂಭದ ಅಂಗವಾಗಿ ಇಂದು ಈದ್ ಮಿಲಾದ್ ಮೆರವಣಿಗೆ ನಡೆಯಿತು. ಹೊಸನಗರ ರಸ್ತೆಯಿಂದ ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯಲ್ಲಿನ ಖಬರ್ ಸ್ಥಾನ್ ವರೆಗೆ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು….
ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi
ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…
ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ
ರಿಪ್ಪನ್ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…
ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ, ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…
ರಿಪ್ಪನ್ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet
ರಿಪ್ಪನ್ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….
ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ ಕಾರ್ಯ|Heddaripura
ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…
ರಿಪ್ಪನ್ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ
ರಿಪ್ಪನ್ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…
ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…