Headlines

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More