Headlines

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ಜಿಲ್ಲೆಯಲ್ಲಿ ಚುರುಕುಗೊಂಡ ಮತದಾನ : ಸಂಜೆಯೇ ಫಲಿತಾಂಶ ಘೋಷಣೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730,…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ನಿನ್ನೆ ಆರತಕ್ಷತೆಯಲ್ಲಿ ಊಟ ಮಾಡಿದವರು ಇಂದು ಆಸ್ಪತ್ರೆಗೆ ದಾಖಲು : ಸುಮಾರು 150 ಕ್ಕೂ ಹೆಚ್ಚು ಜನರು ಅಸ್ವಸ್ಥ , ಎಲ್ಲಿ ಗೊತ್ತಾ ??

ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  21 ಜನ ದಾಖಲಾಗಿದ್ದಾರೆ. ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More