Headlines

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಹೊಸನಗರ ತಾಲೂಕಿನಲ್ಲಿ ಮಕ್ಕಳ ಅಪಹರಣಕ್ಕೆ ಪ್ರಯತ್ನ ಸುಳ್ಳು ಸುದ್ದಿ | ತಪ್ಪು ಸಂದೇಶ ರವಾನಿಸುವವರ ಮೇಲೆ ಕಠಿಣ ಕ್ರಮ : ಸಿಪಿಐ ಗಿರೀಶ್ ಖಡಕ್ ಎಚ್ಚರಿಕೆ

ಹೊಸನಗರ: ಹೊಸನಗರ ಗ್ರಾಮದಲ್ಲಿ ಮಕ್ಕಳ ಕಳ್ಳ ಸಿಕ್ಕಿಬಿದ್ದು ಓಡಿ ಹೋಗಿದ್ದಾನೆ ಈತ ಸಿಕ್ಕಿದರೆ ಪೊಲೀಸರಿಗೆ ತಿಳಿಸಿ ಎಂಬ ಮಾಹಿತಿ ಸಹಿತ ವ್ಯಕ್ತಿಯೊಬ್ಬನ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಹೊಸನಗರ ಸರ್ಕಲ್ ಇನ್ಸಪೆಕ್ಟರ್ ಗಿರೀಶ್ ಬಿ ಸಿ  ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ಪ್ರಕರಣ ತಾಲೂಕಿನಲ್ಲಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಇಂತಹ ಮಾಹಿತಿಗಳ ಸತ್ಯಾಸತ್ಯತೆ ಅರಿಯಬೇಕು. ಮಾಹಿತಿ ಅರಿಯದೆ ಬೇರೆ ವ್ಯಕ್ತಿಗಳಿಗೆ, ಜಾಲತಾಣದ ಗ್ರೂಪ್ ಗಳಿಗೆ ಫಾರ್ ವರ್ಡ್ (FORWORD) ಮಾಡುವುದು…

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಹೆಬ್ಬಂಡೆಯ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರ :

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಹೆಬ್ಬಂಡೆಯ ಅಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಜನಸಾಗರವೇ ಶ್ರದ್ದಾಭಕ್ತಿಯಿಂದಾ ಹರಿದು ಬಂದಿತು. ಅಮ್ಮನಘಟ್ಟ ಜಾತ್ರೆ ನಾಡಿನ ಪ್ರಮುಖ ಜಾತ್ರೆಗಳಲ್ಲಿ ಒಂದಾಗಿದ್ದು ಮಲೆನಾಡಿನ ಸಹ್ಯಾದ್ರಿಯ ಪರ್ವತ ತಪ್ಪಲಿನಲ್ಲಿ  ವಿಶಿಷ್ಟ ಪ್ರಾಕೃತ್ತಿಕ ಸೌಂದರ್ಯದಲ್ಲಿ ಕಂಗೊಳಿಸುವ ಧಾರ್ಮಿಕ ಶ್ರದ್ದಾಕೇಂದ್ರವಾದ ಜೇನುಕಲ್ಲಮ್ಮ ಹಲವು ಜನಾಂಗಗಳ ಕುಲದೇವತೆಯಾಗಿ ನೆಲೆ ನಿಂತಿರುವ ದೇವಿಗೆ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಪುರೋಹಿತ ಬಳಗ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಪಿತೃ ಪಕ್ಷದಲ್ಲಿ ಹುಣ್ಣಿಮೆಯಿಂದ ಅಮಾವಾಸ್ಯೆಯ ವರೆಗೆ ಎರಡು ಮಂಗಳವಾರ ಶುಕ್ರವಾರದೊಂದು…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಗ್ರಾಮೀಣ ವಿದ್ಯಾರ್ಥಿಗಳ ಕನಸು ನನಸಾಗಿಸಲು ಪ್ರಾಯೋಗಿಕ ತರಗತಿಗಳು ಸಹಕಾರಿ : ಆರಗ ಜ್ಞಾನೇಂದ್ರ – 45 ದಿನಗಳ ಕಾಲ ನಡೆದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಕಾರ್ಯಕ್ರಮ

ಕೋಣಂದೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನಸು ನಿರ್ಮಾಣಗೊಳ್ಳಲು ಪ್ರಾಯೋಗಿಕ ತರಗತಿಗಳು ಸಹಕಾರಿ ಆಗಿದೆ  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ  ಸಮೀಪದ ಗುಡ್ಡೇಕೊಪ್ಪ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಂಗಳೂರಿನ ಯುವಿಪೆಪ್ ಎಜುಕೇಶನ್ ಪ್ರೈವೇಟ್ ಲಿಮಿಟೆಡ್  45 ದಿನಗಳ ಕಾಲ ಆಯೋಜಿಸಿದ್ದ ಆಧುನಿಕ ತಾಂತ್ರಿಕ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಪ್ರಾಯೋಗಿಕ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ  ಶಾಲೆಯನ್ನು ಆಯ್ದುಕೊಂಡು ,ಆ ಮಕ್ಕಳಲ್ಲಿ ವಿಜ್ಞಾನದ ಅರಿವನ್ನು ಮೂಡಿಸಿ ಭವಿಷ್ಯದ ಆವಿಷ್ಕಾರಕ್ಕೆ ಅಣಿಗೊಳಿಸುವ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More

ಮಲೆನಾಡಿನಲ್ಲೊಂದು ಸೋರುತ್ತಿರುವ ಸರ್ಕಾರಿ ಪ್ರೌಡ ಶಾಲೆ – ಮಳೆ ಬಂದರೆ ತರಗತಿಗಳಲ್ಲಿ ಅರಳುತ್ತವೆ ಬಣ್ಣ ಬಣ್ಣದ ಛತ್ರಿಗಳು

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಳೆ ಬಂದರೇ ಸಾಕು ವಿದ್ಯಾರ್ಥಿಗಳು ತರಗತಿ ಕೊಠಡಿಯಲ್ಲಿ ಬಣ್ಣ ಬಣ್ಣದ ಛತ್ರಿ ಹಿಡಿದು ಕುಳಿತುಕೊಳ್ಳುವುದರೊಂದಿಗೆ ಪಾಠ ಪ್ರವಚನ ಕೇಳುವ ದುಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಕೋಟ್ಯಾಂತರ ಹಣ ವ್ಯಯ ಮಾಡುತ್ತಿದ್ದು ಶಾಲಾ ಕಾಲೇಜ್‌ಗಳ ಕಟ್ಟಡ ನಿರ್ಮಾಣಕ್ಕೂ ಹೆಚ್ಚು ಅನುದಾನ ನೀಡುತ್ತಿದ್ದರೂ ಕೂಡಾ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ಮಾತ್ರ ಕಣ್ಣಿಗೆ ಕಂಡಿಲ್ಲವೇನೂ ಎಂಬ ಅನುಮಾನ ಕಾಡುವಂತಾಗಿದೆ. 2006 ರಲ್ಲಿ…

Read More