ಜಿಲ್ಲಾ ಸುದ್ದಿ:
ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ
ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕನ್ನಡ ಉಪನ್ಯಾಸಕ ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ ರಾಮಮಂದಿರದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…
ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು
ರಿಪ್ಪನ್ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು. ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…
ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ರಿಪ್ಪನ್ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…
ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು
ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04 ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…
ರಿಪ್ಪನ್ಪೇಟೆ : ಶಾಲೆಯ ಮೇಲೆ ಉರುಳಿಬಿದ್ದ ಬೃಹತ್ ಮರ – ತಪ್ಪಿದ ಭಾರಿ ಅನಾಹುತ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಮಳವಳ್ಳಿ ಗ್ರಾಮದಲ್ಲಿ ಶಾಲಾ ಸಮಯದಲ್ಲೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ಭಾರಿ ಮರವೊಂದು ಉರುಳಿಬಿದ್ದರೂ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ದೊಡ್ಡಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶಾಲೆಯ ಎರಡು ಛಾವಣಿ ಸಂಪೂರ್ಣ ಹಾನಿಯಾಗಿದೆ. ಇಂದು ಮೂಗೂಡ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದಿದ್ದ ಎಲ್ಲಾ ಮಕ್ಕಳನ್ನು ಬೆಳಿಗ್ಗೆ 9.30 ರ ಸಮಯಕ್ಕೆ ಮೂಗೂಡ್ತಿ…
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…
ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ
ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…
ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ
ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…
ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ನಗರ ಶೂಟೌಟ್ ಪ್ರಕರಣ : ಅಂಬರೀಶ್ ಕೊಲೆ ಕೇಸನ್ನು ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ ಪ್ರಯತ್ನಿಸುತ್ತಿದ್ದಾರೆ – ಬೇಳೂರು ಆರೋಪ !!
ತೀರ್ಥಹಳ್ಳಿ : ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಶ್ ಎನ್ನುವವರ ಗನ್ ಶಾಟ್ ಘಟನೆ ನಡೆದು 26 ದಿನವಾದರೂ ಕುಟುಂಬದವರಿಗೆ ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಸರಿಯಾದ ರೀತಿಯಲ್ಲಿ ತನಿಖೆ ನೆಡೆಸಿ ಕುಟುಂಬದವರಿಗೆ ನ್ಯಾಯ ಕೊಡಿಸದಿದ್ದರೆ ಉಗ್ರ ಹೋರಾಟದ ನಡೆಸಲಾಗುವುದು ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ನೇಗಿಲೋನಿ ಗ್ರಾಮದಲ್ಲಿ ಶೂಟೌಟ್ ಆಗಿದ್ದು ಬಡ ಕುಟುಂಬದ…