Headlines

ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

ರಿಪ್ಪನ್‌ಪೇಟೆ : 24 ಗಂಟೆಯೊಳಗೆ ಸರ್ಕಾರಿ ವೈದ್ಯರ ವರ್ಗಾವಣೆಗೊಳಿಸುವಂತೆ ಗ್ರಾಮಸ್ಥರ ಒಕ್ಕೊರಲ ಆಗ್ರಹ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದರಿಲ್ಲದೇ ರೋಗಿಗಳು ಹಾಗೂ ಆಕಸ್ಮಿಕ ಅಪಘಾತಕ್ಕೀಡಾದವರು ಪರಿತಪಿಸುವಂತಾಗಿದ್ದು ಕೂಡಲೇ ನಾಲ್ವರು ವೈದ್ಯಾಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾ ಭವನದಲ್ಲಿ 2022-23 ನೇ ಸಾಲಿನ ಗ್ರಾಮ ಸಭೆಯಲ್ಲಿ ಹೆಸರಿಗೆ ನಾಲ್ವರು ವೈದ್ಯಾಧಿಕಾರಿಗಳಿದ್ದರೂ ಕೂಡಾ ರಾತ್ರಿ ವೇಳೆ ಅರೋಗ್ಯ ಕಾರ್ಯಕರ್ತೆಯೇ ವೈದ್ಯರಾಗಿ ಹೆರಿಗೆ ಮಾಡಿಸುವುದು ಮತ್ತು ತುರ್ತು ಚಿಕಿತ್ಸೆ ನೀಡುವಂತಾಗಿದೆ ಹಾಗಾದರೆ ನಮ್ಮೂರಿಗೆ ಇಂತಹ ಬೇಜವಾಬ್ದಾರಿ ವೈದ್ಯಾಧಿಕಾರಿಗಳು ಏಕೆ…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha

ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ –  ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು.  ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…

Read More

ರಿಪ್ಪನ್‌ಪೇಟೆಯಲ್ಲಿ ನಡೆದ ಅದ್ದೂರಿ ಆಳ್ವಾಸ್ ನುಡಿಸಿರಿ ಹಬ್ಬ – ಕಲಾರಸಿಕರನ್ನು ಮನೋರಂಜಿಸಿದ ಅಳ್ವಾಸ್ ವಿದ್ಯಾರ್ಥಿಗಳು|Alvas

ರಿಪ್ಪನ್‌ಪೇಟೆ;-ಆಳ್ವಾಸ್ ನುಡಿಸಿರಿ ವಿರಾಸತ್ ಮತ್ತು ಕಲಾಕೌಸ್ತುಭ ಕನ್ನಡ ಸಂಘ ಇವರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಅಯೋಜಿಸಲಾದ `ಆಳ್ವಾಸ್ ಸಾಂಸ್ಕೃತಿಕ ವೈಭವ’’ಮಲೆನಾಡಿನ ಕಲಾರಸಿಕರನ್ನು ಮನೋರಂಜಿಸಿತು. ಈ ಕಾರ್ಯಕ್ರಮಕ್ಕೆ ಶಾಸಕ ಹರತಾಳು ಹಾಲಪ್ಪ ಚಾಲನೆ ನೀಡಿ ಮಾತನಾಡಿ ನಶಿಸುತ್ತಿರುವ ಭಾರತೀಯ ಜಾನಪದ ಸಂಸ್ಕೃತಿಯನ್ನು  ಉಳಿಸಿ ಪ್ರೋತ್ಸಾಹಿಸುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ ಜಾನಪದದ ಜಾಗೃತಿಯನ್ನು ಮೂಡಿಸುವ ಮಹಾರ್ತ್ಕಾಯದಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಡಾ.ಎಂ ಮೋಹನ್ ಆಳ್ವರ ಕಾರ್ಯ ಪ್ರಶಂಸನೀಯವಾಗಿದೆ ಎಂದರು. ಭಾರತೀಯ ಕಲೆ ಸಾಹಿತ್ಯ ಭರತನಾಟ್ಯ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More