Headlines

ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet

ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet

ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…

Read More

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ|CM

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ.‌ ಮಧ್ಯಾಹ್ನದ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸಿ ಸಂಜೆ ಬೆಂಗಳೂರಿಗೆ ನಿರ್ಗಮಿಸುತ್ತಿದ್ದಾರೆ. ನವೆಂಬರ್ 25 ರ ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.50 ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 4.15 ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್‍ನಿಂದ ಹೊರಟು ಸಂಜೆ 5.35 ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣ ತಲುಪುವರು…

Read More

ಜನಾಕ್ರೋಶ ಪಾದಯಾತ್ರೆ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ : ಕಲಗೋಡು ರತ್ನಾಕರ್|Congress

ರಿಪ್ಪನ್‌ಪೇಟೆ : ಇದೇ 28 ರಂದು ಅಯನೂರಿನಿಂದ ಶಿವಮೊಗ್ಗಕ್ಕೆ ಹತ್ತು ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಾಕ್ರೋಶ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು. ಉಳುವವನೇ ಹೊಲದೊಡೆಯ ಹೋರಾಟದ ಹಿನ್ನಲೆಯ ರಾಜ್ಯದ ಹಿರಿಯ ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಾಕ್ರೋಶ ಪಾದಯಾತ್ರೆ  ಕುರಿತು ಬೆಳ್ಳೂರು, ಅರಸಾಳು ಹಾಗೂ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ…

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More

ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…

Read More