Headlines

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

ರಿಪ್ಪನ್ ಪೇಟೆ : ಗುಡ್ ಶಫರ್ಡ್ ಶಾಲೆಯಲ್ಲಿ ಸಂಭ್ರಮದ ವಿಭಿನ್ನ ರೀತಿಯಲ್ಲಿ ಮಕ್ಕಳ ದಿನಾಚರಣೆ|Ripponpet

ರಿಪ್ಪನ್ ಪೇಟೆ : ಪಟ್ಟಣದ ಗುಡ್ ಶೆಫರ್ಡ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ವಿನೂತನವಾಗಿ ಆಚರಿಸಲಾಯಿತು. ಮಕ್ಕಳಿಂದ ಮಕ್ಕಳಿಗಾಗಿ ಆಯೋಜನಗೊಂಡ ಈ ಕಾರ್ಯಕ್ರಮವು ಶಿಕ್ಷಕರ ಹಾಗೂ ಪೋಷಕರ ವರ್ಗದವರ ಮನಸೂರೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ. ಕಾರ್ಯಕ್ರಮದ ಪ್ರಾಸ್ತವಿಕ ನುಡಿ, ಕಾರ್ಯಕ್ರಮದ ಮುಖ್ಯ ಅತಿಥಿಗಳು, ಕಾರ್ಯಕ್ರಮದಲ್ಲಿನ ಪ್ರಾರ್ಥನೆ ನಿರೂಪಣೆ, ಸ್ವಾಗತ,ಎಲ್ಲಾವನ್ನು ಮಕ್ಕಳೇ ನೆರವೇರಿಸಿದರು. ಮಕ್ಕಳಿಂದ ವಿವಿಧ ಛದ್ಮವೇಷ, ಏಕಪಾತ್ರಾಭಿನಯ, ಹಾಡು, ಡಾನ್ಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾರ್ಥಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಾಯಿತು  ಅಧ್ಯಕ್ಷತೆಯನ್ನು  ಆರಾಧ್ಯ ಎಸ್….

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…

Read More

ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ  67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು  ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…

Read More