Headlines

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…

Read More

ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತರ ನಿರ್ಲಕ್ಷ : ಹಿರಿಯ ಕಾರ್ಯಕರ್ತ ಯೋಗೇಂದ್ರಪ್ಪ ಗೌಡ ಆರೋಪ

ರಿಪ್ಪನ್ ಪೇಟೆ: ಹೊಸನಗರ ತಾಲೂಕಿನಲ್ಲಿ ಕಳೆದ 35 ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷಕ್ಕೆ ಒಳಪಡಿಸಲಾಗಿದೆ. ಸರಕಾರ ಮತ್ತು ಎಲ್ಲಾ ಅಧಿಕಾರವಿದ್ದರೂ ಹಿರಿಯ ಕಾರ್ಯಕರ್ತರು ಕಡೆಗಣಿಸಿ ನಿನ್ನೆ ಮೊನ್ನೆ ಬಂದಂತಹ ಕಾಂಗ್ರೆಸ್ ಪಕ್ಷದವರಿಗೆ ಮಣೆ ಹಾಕಿ ನಾಮನಿರ್ದೇಶನ ಮಾಡಲಾಗುತ್ತಿದೆ ಆದ್ದರಿಂದ ಆಗಸ್ಟ್ 17ರ ಬುಧವಾರ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರ ಕಚೇರಿ ಎದುರು ಧರಣಿ ನಡೆಸುವುದಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಯೋಗೇಂದ್ರಪ್ಪ ಗೌಡ ರವರು ತಿಳಿಸಿದ್ದಾರೆ.  ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ : ದಂಡದ ಬದಲು ಇನ್ಸೂರೆನ್ಸ್ ಮಾಡಿಸಿದ ಪೊಲೀಸರು

ರಿಪ್ಪನ್‌ಪೇಟೆ :  ಇಂದು ಪಟ್ಟಣದ ಪೊಲೀಸರು ಬೈಕ್ ಸವಾರರಿಗೆ ಅವಶ್ಯಕ ದಾಖಲೆಗಳ ಬಗ್ಗೆ ವಿನೂತನವಾಗಿ ಚುರುಕು ಮುಟ್ಟಿಸುವ ಕಾರ್ಯಾಚರಣೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಇಂದು ಪಟ್ಟಣದಲ್ಲಿ ವಾಹನಗಳನ್ನು ತಡೆ ಹಿಡಿದು ಸಾವಿರ ದಂಡ ಕಟ್ಟುವ ಬದಲು ಸಾವಿರ ರೂಪಾಯಿಯಲ್ಲೇ ಇನ್ಸೂರೆನ್ಸ್ ಮಾಡಿಸಿ ಎಂದು ಸವಾರರಿಗೆ ಬುದ್ದಿ ಹೇಳಿ ಸ್ಥಳದಲ್ಲಿಯೇ ಇನ್ಸೂರೆನ್ಸ್ ಹಾಕಿಸಿ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತ್ತು. ಪೊಲೀಸರು ವಾಹನ ಅಡ್ಡ ಹಾಕಿದ್ರೆ ಸಾಕು, ಲೈಸೆನ್ಸ್ ಎಲ್ಲಿ, ಆರ್.ಸಿ. ಕೊಡು, ಎಮಿಷನ್…

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More