Headlines

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಣೆ | ಕಾರ್ಡ್ ಚಿಕ್ಕದು – ಸೌಲಭ್ಯ ದೊಡ್ಡದು -ಡಾ. ಅವಿನಾಶ್ ಶೆಟ್ಟಿ|Manipal card

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.  ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪಾಲ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ…

Read More

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More

ಹೆಲ್ಮೆಟ್ ಧರಿಸಿ ಸೈಕಲ್ ತುಳಿದು ಬೈಕ್ ಪ್ರಯಾಣಿಕರಿಗೆ ವಿಭಿನ್ನ ರೀತಿಯಲ್ಲಿ ಜಾಗೃತಿ ಮಾಡಿಸಿದ 72 ರ ಹರೆಯದ ಸಾಮಾಜಿಕ ಹೋರಾಟಗಾರ|Ripponpet

ರಿಪ್ಪನ್‌ಪೇಟೆ : 72 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರಿಗೆ ಹೆಲ್ಮೆಟ್‌ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದೂ ಸೈಕಲ್‌ ಮೂಲಕ ಎಂಬುದು ಮತ್ತೊಂದು ವಿಶೇಷ ಮೂರು ತಲೆಯ ಹೆಲ್ಮೆಟ್‌ ಹಾಕಿ, ತಮ್ಮ ಹಳೇ ಸೈಕಲ್‌ ಏರಿ ರಸ್ತೆಯುದ್ದಕ್ಕೂ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಜನಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತರಾಗಿರುವ ಟಿ.ಆರ್.ಕೃಷ್ಣಪ್ಪ, ಸೈಕಲ್ ಸವಾರಿಯ ಮೂಲಕ ವಿಭಿನ್ನ ರೀತಿಯಲ್ಲಿ ಮೂರು ಹೆಲ್ಮೆಟ್ ಹಾಕಿಕೊಂಡು ಜನರಲ್ಲಿ ಜಾಗೃತಿ…

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More