ಜಿಲ್ಲಾ ಸುದ್ದಿ:
ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ
ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…
ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು
ಹುಂಚ : ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…
ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು
ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…
ಕಾಶ್ಮೀರಿ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ
ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…
ರಿಪ್ಪನ್ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ
ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…
ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ….
ಪತ್ರಿಕಾ ರಂಗವು ಸಾರ್ವಜನಿಕರ ಧ್ವನಿಯಾಗಿ ಅವರ ಕುಂದು ಕೊರತೆಗಳನ್ನು ಸರ್ಕಾರಕ್ಕೆ ತಿಳಿಸುವಂತಾಗಬೇಕು : ಆರಗ ಜ್ಞಾನೇಂದ್ರ
ಹೊಸನಗರ : ಇಂದಿನ ದಿನದಲ್ಲಿ ಗ್ರಾಮೀಣ ಪತ್ರಿಕೋದ್ಯಮ ಪರಿಣಾಮಕಾರಿಯಾಗಿದ್ದು.. ಇಲ್ಲಿಯ ವರದಿಗಳು ರಾಜ್ಯಮಟ್ಟದ ಪತ್ರಿಕೆಗಳ ಮುಖಪಟದಲ್ಲಿ ಮನ್ನಣೆ ಪಡೆಯುತ್ತಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ ಪಟ್ಟರು. ಭಾನುವಾರದಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹೊಸನಗರ ತಾ. ಶಾಖೆ, ಇವರಿಂದ ಪಟ್ಟಣದ ಗಾಯತ್ರಿ ಮಂದಿರದಲ್ಲಿ ಆಯೋಜಿಸಿದ್ದ, ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನತಂತ್ರ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಎಂಬಂತೆ ಪತ್ರಿಕಾ ರಂಗವು 4 ನೇ ಅಂಗವಾಗಿದೆ….
ರಿಪ್ಪನ್ಪೇಟೆ : ಮತಾಂತರಕ್ಕೆ ಯತ್ನ ಆರೋಪ – ಹಿಂದೂಪರ ಸಂಘಟನೆಗಳಿಂದ ತರಾಟೆ
ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯಲ್ಲಿನ ಖಾಸಗಿ ವಸತಿ ಗೃಹದ ಸಭಾ ಭವನದಲ್ಲಿ ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ಹಿಂದೂ ಧರ್ಮದ ಕೆಲವರನ್ನು ಮತಾಂತರ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ರಿಪ್ಪನ್ ಪೇಟೆ ಹಿಂದೂ ಪರಸಂಘಟನೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ವಸತಿ ಗೃಹದ ಸಭಾಭವನಕ್ಕೆ ಧಾವಿಸಿ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಸಂಘಟನೆಯವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಭಾನುವಾರ ನಡೆದಿದೆ. ನಡೆದಿದ್ದೇನು…? ಪ್ರಾರ್ಥನಾ ಕೇಂದ್ರ ಹೊರತುಪಡಿಸಿ ಖಾಸಗಿ ಸ್ಥಳಗಳಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕೆಂದು ಪ್ರೊಟೆಸ್ಟೆಂಟ್ ಕ್ರಿಶ್ಚಿಯನ್ ಪಂಗಡದವರು ರಿಪ್ಪನ್ಪೇಟೆ ಗ್ರಾಮಪಂಚಾಯತ್…
ಎದೆ ಮಟ್ಟದ ನೀರಿನಲ್ಲಿ ಸಾಗಿ ಅಂತ್ಯಸಂಸ್ಕಾರ – ಗೃಹಸಚಿವರ ಕ್ಷೇತ್ರದಲ್ಲಿ ಏನಿದು ಅವ್ಯವಸ್ಥೆ !
ತೀರ್ಥಹಳ್ಳಿ : ಇಲ್ಲಿ ಮಳೆಗಾಲ ಬಂತೆಂದರೆ ಸಾಕು ಜನರ ಪರದಾಟ ಆರಂಭವಾಗುತ್ತದೆ. ಇಲ್ಲಿ ಮಳೆಗಾಲದಲ್ಲಿ ಬದುಕಲೂ ಕಷ್ಟ.. ಸತ್ತರೂ ಕಷ್ಟ. ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..! ಹೌದು, ಆಶ್ಚರ್ಯವಾದರೂ ಸತ್ಯ. ಇದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದ ಗ್ರಾಮವೊಂದರ ಪರಿಸ್ಥಿತಿ. ತಾಲೂಕಿನ ಹೊಸಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಮೃತ ಶರೀರವನ್ನು ಗ್ರಾಮಸ್ಥರು ನೀರು ತುಂಬಿದ ರಸ್ತೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಅವರು ವಯೋ…