Headlines

ಡಿನೋಟಿಫಿಕೇಷನ್ ರದ್ದುಗೊಳಿಸಿದ ರಾಜ್ಯ ಸರ್ಕಾರ : ಅತಂತ್ರಗೊಂಡ ಶರಾವತಿ ಮುಳುಗಡೆ ಸಂತ್ರಸ್ತರ ಬದುಕು|Sharavathi

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಕನಸು ಮತ್ತೆ ಕಮರಿ‌ ಹೋಗಿದೆ.ನ್ಯಾಯಾಂಗ ನಿಂದನೆ ಭಯದಿಂದ‌ ರಾಜ್ಯ ಸರ್ಕಾರ ಡಿನೋಟಿಫಿಕೇಷನ್ ರದ್ದುಗೊಳಿಸಿದೆ. ಈ ಮೂಲಕ ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರನ್ನು ಸರ್ಕಾರ ಮತ್ತೊಮ್ಮೆ ಅನಾಥರನ್ನಾಗಿಸಿದೆ. ಹೌದು, ವಿದ್ಯುತ್ ಉತ್ಪಾದನೆ ಸಲುವಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಶಿವಮೊಗ್ಗದ ಸಾಗರ, ಹೊಸನಗರ ತಾಲೂಕಿನ 166 ಗ್ರಾಮಗಳ 6,177 ಕುಟುಂಬಗಳನ್ನು ಎತ್ತಂಗಡಿ ಮಾಡಲಾಗಿತ್ತು. ಅಂದಿನ‌ ರಾಜ್ಯ ಸರ್ಕಾರ 1962 ರಲ್ಲಿಯೇ ಪುನರ್ವಸತಿಗಾಗಿ ಅರಣ್ಯ ಭೂಮಿಯನ್ನ…

Read More

ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

ರಿಪ್ಪನ್‌ಪೇಟೆ : ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಈ ಬಾರಿ ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಈ ಬಾರಿ ಅದ್ದೂರಿಯಾಗಿ ಈದ್ ಮಿಲಾದ್ ಕಾರ್ಯಕ್ರಮವನ್ನು ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ. ಸತತ ಎರಡು ಮೂರು ವರ್ಷಗಳ ಕಾಲ ಮಹಾಮಾರಿ ಕೊವೀಡ್ -19 ಅಟ್ಟಹಾಸದಿಂದ ಸಂಭ್ರಮದ ಈದ್ ಮಿಲಾದ್ ಆಚರಣೆಗೆ ತೊಡಕಾಗಿತ್ತು ಹಾಗಾಗಿ ಈ ಬಾರಿ ಅದ್ದೂರಿ ಈದ್ ಮಿಲಾದ್ ಹಬ್ಬವನ್ನು 20,21,22 ಮತ್ತು…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More