ಆಲುವಳ್ಳಿ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ|Aluvalli
ರಿಪ್ಪನ್ಪೇಟೆ: ಇಲ್ಲಿನ ಸಮೀಪದ ಆಲುವಳ್ಳಿ ಗ್ರಾಮದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿಯಾಗಿ ನಡೆಯಿತು. ಆಲುವಳ್ಳಿ ಗ್ರಾಮದ ವೃತ್ತದಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆ ಮತ್ತು ಮೆರವಣಿಗೆ ನಡೆಯಿತು. ಮಕ್ಕಳು ವಿವಿಧ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಎಲ್ಲಾರ ಗಮನ ಸೆಳೆದರು. ಕಾರ್ಯಕ್ರಮದ ಧ್ವಜಾರೋಹಣ ಕಾರ್ಯಕ್ರಮವನ್ನು ಕನ್ನಡ ಸಂಘದ ಅಧ್ಯಕ್ಷರಾದ ಟೀಕೇಶಪ್ಪ ಗೌಡ ನೆರವೇರಿಸಿದರು ಈ ಸಂಧರ್ಭದಲ್ಲಿ ಗ್ರಾಮದ ಹೈಮಾಸ್ಕ್ ಬೀದಿ ದೀಪವನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷ…