ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆ : ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ
ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು…
ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ
ತೀರ್ಥಹಳ್ಳಿ : ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…
ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್
ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್ಪೋಸ್ಟ್ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ. ಮೇಲ್ಬಾಗ ಆಗುಂಬೆ ಘಾಟಿ ಚೆಕ್ಪೋಸ್ಟ್ ಬಳಿಯೇ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇
ಬುಕ್ಕಿವರೆ – ಬೆಳ್ಳೂರು – ರಿಪ್ಪನ್ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ
ರಿಪ್ಪನ್ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…
ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ MSIL ಉದ್ಯೋಗಿ ನವೀನ್ ಕುಮಾರ್ ಕುಟುಂಬಕ್ಕೆ 5 ಲಕ್ಷದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ
ರಿಪ್ಪನ್ಪೇಟೆ : ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ MSIL ಮದ್ಯ ಮಾರಾಟ ಮಳಿಗೆಯಲ್ಲಿ ADO ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸಾಳು ನಿವಾಸಿ ನವೀನ್ ಕುಮಾರ್ ರವರ ಕುಟುಂಬಕ್ಕೆ MSIL ಅಧ್ಯಕ್ಷರು ಹಾಗೂ ಶಾಸಕರಾದ ಹೆಚ್.ಹಾಲಪ್ಪ ರವರು MSIL ವತಿಯಿಂದ 5 ಲಕ್ಷ ರೂ ಪರಿಹಾರ ಧನದ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು. ಇತ್ತೀಚೆಗೆ ಸಮೀಪದ ಅರಸಾಳು – ಬೆನವಳ್ಳಿ ನಡುವಿನ ರಸ್ತೆಯಲ್ಲಿ ಟೊಯೋಟಾ ಇಟಿಯೋಸ್ ಕಾರ್ ಹಾಗೂ ಬಜಾಜ್ ಡಿಸ್ಕವರ್ ಬೈಕ್ ನಡುವೆ ನಡೆದ ಭೀಕರ…
ಹಿಂದೂ ಹರ್ಷನ ಸಹೋದರಿ ಅಶ್ವಿನಿ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು??? ಈ ಸುದ್ದಿ ನೋಡಿ
ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜು ನನ್ನ ಅತ್ಯಂತ ಆಪ್ತ ಮಿತ್ರ ಎಂದು ಮೊದಲು ಹೇಳಿದರು. ಈ ವೇಳೆ ಪತ್ರಕರ್ತರು ರಾಜು ಅಲ್ಲ ಹರ್ಷ ಎಂದು ನೆನಪಿಸಿದ್ದು, ಈ ವೇಳೆ ಸಚಿವರು, ಸಾರಿ ಹರ್ಷ ನನ್ನ…
ಮುಂದುವರಿದ ಭಾರಿ ಮಳೆ : ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ :
ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 8ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ
ರಿಪ್ಪನ್ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…
MSIL ರಾಯಭಾರಿಯಾಗಿ ಆಯ್ಕೆಯಾದ ರಾಷ್ಟ್ರೀಯ ಹಾಕಿ ಕ್ರೀಡಾಪಟು ರಿಪ್ಪನ್ಪೇಟೆಯ ಪೂಜಿತಗೌಡ : 5 ಲಕ್ಷದ ಚೆಕ್ ವಿತರಿಸಿದ ಹರತಾಳು ಹಾಲಪ್ಪ
ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪ್ರತಿಭಾನ್ವಿತ ಕ್ರೀಡಾ ತಾರೆ ಪೂಜಿತ ಗೌಡ 5 ವರ್ಷಕ್ಕೆ ಕರ್ನಾಟಕ ಎಂಎಸ್ ಐಎಲ್ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಕ್ರೀಡಾ ಪ್ರತಿಭೆ ಪೂಜಿತ ಗೌಡ ರವರಿಗೆ ಎಂಎಸ್ ಐ ಎಲ್ ವತಿಯಿಂದ ಚೆಕ್ ವಿತರಿಸಿದರು. ನಂತರ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಹಾಕಿ ಪ್ರತಿಭೆಯೊಬ್ಬಳು ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ…