ಜಿಲ್ಲಾ ಸುದ್ದಿ:
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು…
ರಿಪ್ಪನ್ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ
ರಿಪ್ಪನ್ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು ಅತಿಥಿಗಳು ಮಾತ್ರ ಮಾತನಾಡಿ ತಮ್ಮ ಚಿಂತನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಉಪನ್ಯಾಸಕರಾದ ಡಾ ಗಣೇಶ್ ಆಚಾರ್ ವಿಶ್ವಕರ್ಮ ಜಯಂತಿ ಶ್ರಮಜೀವಿಗಳ ಹಬ್ಬವಾಗಿದ್ದು, ಸಮಾಜದ ನೈತಿಕ ಶಕ್ತಿ ಹಾಗೂ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದರು. “ಬಡಗಿ, ಕಮ್ಮಾರರು, ಕಾರ್ಮಿಕರು ತಮ್ಮ ಪರಿಶ್ರಮದಿಂದಲೇ ಸಮಾಜಕ್ಕೆ ಆಧಾರವಾಗಿದ್ದಾರೆ. ಅವರ ಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ”…
ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ. ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮೃತ ಕಾರ್ಮಿಕನು…
ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು
ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಶರಣಾಗಿದ್ದಾನೆ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ಒಪಿಡಿಗೆ ಅಡ್ಮಿಷನ್ ಪತ್ರ ಪಡೆಯುವ ಪಕ್ಕದಲ್ಲಿ ಸೂಪರ್ ಸ್ಪೆಷಾಲಿಟಿಗೆ ದಾರಿ ಎಂಬ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ….
ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ
ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…
ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ
ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….
ರಿಪ್ಪನ್ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಂಗಮ
ರಿಪ್ಪನ್ಪೇಟೆ : ಈದ್ ಮಿಲಾದ್ ಅಂಗವಾಗಿ ನಾಳೆ(17-09-2025) ಸೌಹಾರ್ದ ಸಮಾವೇಶ ರಿಪ್ಪನ್ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಬುಧವಾರ ಸೌಹಾರ್ದ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ಅಫ಼್ಜಲ್ ಬ್ಯಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS ಹಾಗೂ SSF ರಿಪ್ಪನ್ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರವಾದಿಯವರ 1500ನೇ ಜನ್ಮ ದಿನದ ಪ್ರಯುಕ್ತ…
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು
ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…
ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ
ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ಪೇಟೆ: ಹೊಸನಗರ ತಾಲ್ಲೂಕಿನ ಒಕ್ಕಲಿಗರ ಸಮಾಜವು ಜನಸಂಖ್ಯೆಯಲ್ಲಿ ಕಡಿಮೆಯಾದರೂ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಬಡವರ ಸಹಾಯಕ್ಕೆ ಸದಾ ಕೈಚಾಚಿ ಸಮಾಜದಲ್ಲಿ ಮಾದರಿಯಾಗುತ್ತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಭಿಪ್ರಾಯಪಟ್ಟರು. ರಿಪ್ಪನ್ಪೇಟೆಯ ವಿಶ್ವಮಾನವ ಒಕ್ಕಲಿಗರ ಸಭಾಭವನದ ಹಿಂಭಾಗದಲ್ಲಿ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಒಕ್ಕಲಿಗ ಸಮಾಜವು ತನ್ನ ಸಂಘಟನೆಯೊಂದಿಗೆ ಇತರ ಸಮಾಜಗಳನ್ನೂ ಪ್ರೀತಿ–ವಿಶ್ವಾಸದಿಂದ ಸ್ವೀಕರಿಸುತ್ತದೆ. ಕುವೆಂಪುರವರ…