Headlines

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ಪದವಿ ತರಗತಿಯಲ್ಲಿ ರ‍್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಸನ್ಮಾನ :

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಗ್ರಾಮದ ಇಬ್ಬರು ವಿದ್ಯಾರ್ಥಿನಿಯರು ಈ ಬಾರಿಯ ಕುವೆಂಪು ವಿಶ್ವವಿದ್ಯಾನಿಲಯ ನಡೆಸಿದ  ಪದವಿ ಪರೀಕ್ಷೆಯಲ್ಲಿ ಅಂತಿಮ ವರ್ಷದ ಕಲಾ ವಿಭಾಗದಲ್ಲಿ ರ‍್ಯಾಂಕ್ ಗಳಿಸಿ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ರಿಪ್ಪನ್‌ಪೇಟೆ ಪದವಿ‌ ಕಾಲೇಜಿಗೆ ಎರಡು ರ‍್ಯಾಂಕ್ ತಂದುಕೊಟ್ಟಂತಹ ಕಾವ್ಯ ಸಿ ಹಾಗೂ ಸಿಂಧು ಜೆ ರವರಿಗೆ ಕೂರಂಬಳ್ಳಿ ಗ್ರಾಮದ ಕಾವ್ಯ ಸಿ ರವರ ಸ್ವಗೃಹದಲ್ಲಿ ಇಬ್ಬರು…

Read More

ನಾಳೆ ಆಯೋಜಿಸಿರುವ ಕುಪ್ಪಳ್ಳಿಯಿಂದ – ತೀರ್ಥಹಳ್ಳಿ ಪಾದಯಾತ್ರೆ ಬಗ್ಗೆ ಕಿಮ್ಮನೆ ರತ್ನಾಕರ್ ಹೇಳಿದ್ದೇನು??? ಈ ಸುದ್ದಿ ನೋಡಿ

ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಮತ್ತು ರೋಹಿತ್ ಚಕ್ರತೀರ್ಥ ವಿರುದ್ಧ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ನಡೆಯಲ್ಲಿದ್ದು, ಪಠ್ಯ ಪರಿಷ್ಕರಣೆ ಕೈಬಿಟ್ಟು ಹಿಂದಿನ ಬರಗೂರು ರಾಮಚಂದ್ರಪ್ಪ ಅವರ ಪಠ್ಯವನ್ನೇ ಮುಂದುವರಿಸಬೇಕು. ಈ ಪಾದಯಾತ್ರೆ ಪಕ್ಷಾತೀತವಾಗಿ ನಡೆಯಲಿದ್ದು ಎಲ್ಲಾ ಪಕ್ಷದವರು ಪಾಲ್ಗೊಂಡು ತಮ್ಮ ಅಭಿಪ್ರಾಯ ಮಂಡಿಸಬಹುದು ಎಂದರು. ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಕುಂ.ವೀರಭದ್ರಪ್ಪ,…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಪತ್ರಕರ್ತರ ಆರೋಗ್ಯ ಚೆನ್ನಾಗಿದ್ದರೆ ಸುದ್ದಿ ಕೂಡಾ ಆರೋಗ್ಯಕರವಾಗಿರುತ್ತದೆ : ಎಸ್.ರುದ್ರೇಗೌಡ

ಶಿವಮೊಗ್ಗ ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಭಾನುವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವಿಧಾನ ಪರಿಷತ್‌ ಸದಸ್ಯರಾದ ಎಸ್ ರುದ್ರೇಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ರಿಪ್ಪನ್‌ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು‌ ಮುಂದಾದ MBBS ವೈದ್ಯ

ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು. ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್  ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More