ಜಿಲ್ಲಾ ಸುದ್ದಿ:
ಮಲಗಿದ್ದ ತಾಯಿ,ಮಗಳ ಮೇಲೆ ಗೋಡೆ ಕುಸಿತ : ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಭೇಟಿ
ಮನೆಯಲ್ಲಿ ಮಲಗಿದ್ದವರ ಮೇಲೆ ಏಕಾಏಕಿ ಗೋಡೆ ಕುಸಿದು ತಾಯಿ ಮತ್ತು ಮಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಾಲ್ಕನೇ ಕ್ರಾಸ್ನ ಯತಿರಾಜ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದ ಉಮಾ ಹಾಗೂ ಮಗಳು ಕಾವ್ಯ ಎಂಬುವರ ಮೇಲೆ ಇಂದು ಬೆಳಿಗ್ಗೆ ಮನೆಯ ಗೋಡೆ ಕುಸಿದಿದೆ. ಉಮಾ ಅವರ ಕಾಲು ಮುರಿದಿದ್ದು, ಕಾವ್ಯ ಅವರ ಬಲಗೈ ಮುರಿತವಾಗಿದೆ. ಗೋಡೆಯು ಯತಿರಾಜ್ ಅವರ ಕಡೆಯೂ ಬಿದ್ದಿದ್ದರಿಂದ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಗೊಂಡಿರುವ…
ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ
ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…
ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ
ರಿಪ್ಪನ್ಪೇಟೆ: ಪಟ್ಟಣದ ರೋಟರಿ ಕ್ಲಬ್ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…
ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ
ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…
ತುಂಗಾ ನದಿಗೆ ಬಾಗಿನ ಅರ್ಪಿಸಿದ ಗೃಹಸಚಿವ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ : ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಯ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಗುರುವಾರ ಸಂಜೆ ರಾಜ್ಯ ಸರ್ಕಾರದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ ಬಾಗಿನ ಅರ್ಪಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮಳೆ ಎಷ್ಟು ಬೇಕಾದರೂ ಬರಲಿ, ನದಿ ಉಕ್ಕಿ ಹರಿಯಲಿ ಅದು ಸಮೃದ್ಧಿಯ ಸಂಕೇತ ಆದರೆ ಎಲ್ಲೂ ಕೂಡ ಹನಿಯಾಗದ ರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನ ಅರ್ಪಿಸಿದ್ದೇವೆ…
ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ
ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…
ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :
ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…
ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ
ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ. (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …
ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ
ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ ಗುರು ಪೂರ್ಣಿಮೆಯ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…
ಸಾಗರ-ಸಿಗಂದೂರು ಸಂಪರ್ಕ ರಸ್ತೆ ಸಂಪೂರ್ಣ ಬಂದ್ : ವಾಹನ ಸವಾರರ ಪರದಾಟ..
ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಕರಾವಳಿ- ಮಲೆನಾಡು ಭಾಗದಲ್ಲಂತೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರ, ವಿದ್ಯುತ್ ಕಂಬಗಳು ಉರುಳಿದ್ದು, ಗುಡ್ಡ ಕುಸಿತ, ಸೇತುವೆ ಮುಳುಗಡೆ, ನೆರೆಯಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದ್ದು, ತೀರ್ಥಹಳ್ಳಿ, ಸಾಗರ,ಹೊಸನಗರದಲ್ಲಿ ಅವಘಡಗಳು ಹೆಚ್ಚಾಗುತ್ತಿವೆ ಭಾರಿ ಮಳೆಗೆ ರಸ್ತೆ ಮೇಲೆ ಮರಗಳು ಉರುಳಿ ಬಿದ್ದಿದ್ದರಿಂದ ಸಾಗರ- ಸಿಗಂದೂರು ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಸಿಗಂದೂರು ಹೊಳೆಬಾಗಿಲು ಸಮೀಪದ ಅಂಬಾರಗೊಡ್ಡು ಬಳಿ ರಸ್ತೆಗೆ ಅಡ್ಡಲಾಗಿ ಹಲವಾರು ಮರಗಳು ಬಿದ್ದಿದ್ದು, ಕಳೆದ 1 ಗಂಟೆಯಿಂದ ಸಿಗಂದೂರು ರಸ್ತೆ ಸಂಪೂರ್ಣ ಬಂದ್ ಆಗಿದೆ….